ಗದಗ: ಗದಗನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಭಂಧಿಸಿದಂತೆ ಉತ್ತರ ವಲಯ ಐಜಿಪಿ ವಿಕಾಸಕುಮಾರ ವಿಕಾಸ್ ಮಾಹಿತಿ ನೀಡಿದ್ದಾರೆ. ಕೊಲೆಯಾದ ನಾಲ್ವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಶುಕ್ರವಾರ ನಸುಕಿನ ವೇಳೆ ಈ ಘಟನೆ ನಡೆದಿರಬಹುದು ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಸೆಕ್ಷನ್ 396 ಅಡಿ ಗದಗ ಶಹರ ಠಾಣೆಯಲ್ಲಿ ಈಗಾಗಲೇ ದೂರು ದಾಖಲಾಗಿದೆ. ಮೃತ ದೇಹಗಳ ಮೇಲಿನ ಆಭರಣಗಳು ಕೂಡ ಹಾಗೇ ಇವೆ.
ಕೆಳ ಮಹಡಿಯಲ್ಲಿ ತಾಯಿ ಲಕ್ಷ್ಮೀ ಹಾಗೂ ಮಗಳು ಆಕಾಂಕ್ಷಾ ಕೊಲೆಯಾದರೆ, ಮೊದಲನೇ ಮಹಡಿಯಲ್ಲಿ ಪರಶುರಾಮ ಹಾಗೂ ಕಾರ್ತಿಕನ ಕೊಲೆಯಾಗಿದೆ. ಕೊಲೆಗೆ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ. ಕೊಲೆ ಮಾಡಿದ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲಾಗುವುದು. ದುಷ್ಕರ್ಮಿಗಳು ಹೇಗೆ ಬಂದರು ಎಂಬುದರ ಬಗ್ಗೆ ಕುಟುಂಬಸ್ಥರು ನೀಡಿದ ಮಾಹಿತಿ ಮೇರೆಗೆ ತನಿಖೆ ನಡೆಸಲಾಗುವುದು ಎಂದು ಉತ್ತರ ವಲಯ ಐಜಿಪಿ ವಿಕಾಸಕುಮಾರ ವಿಕಾಸ್ ಮಾಹಿತಿ ನೀಡಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)