ಉಡುಪಿ:- ನಗರದ ಕೃಷ್ಣಕೃಪಾ ಕಾಂಪ್ಲೆಕ್ಸ್ನ ಅಂಗಡಿ ಕೋಣೆಯಲ್ಲಿ ವ್ಯಕ್ತಿಯ ಬರ್ಬರ ಕೊಲೆ ನಡೆದಿದೆ.
ರಸ್ತೆ ಉದ್ದಕ್ಕೂ ಗುಂಡಿಗಳದ್ದೆ ದರ್ಬಾರ್: ಅಧಿಕಾರಿಗಳ ವಿರುದ್ದ ಸಾರ್ವಜನಿಕರಿಂದ ಪ್ರತಿಭಟನೆ.
36 ವರ್ಷದ ಪ್ರಶಾಂತ್ ಶೆಟ್ಟಿ ಕೊಲೆಯಾದ ವ್ಯಕ್ತಿ. ಈತ ವಿಜಯನಗರ ಜಿಲ್ಲೆ ಹೂವಿನಹಡಗಲಿ ನಿವಾಸಿ ಎನ್ನಲಾಗಿದ್ದು, ಈರಣ್ಣ ಕೊಲೆ ಆರೋಪಿ ಎನ್ನಲಾಗಿದೆ.
ಯಾವುದೋ ಕಾರಣಕ್ಕೆ ಕ್ಷುಲ್ಲಕ ಗಲಾಟೆಯಿಂದ ಜಗಳ ಆರಂಭವಾಗಿದೆ. ಬಳಿಕ ಹರಿತವಾದ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದೆ. ಕೊಲೆ ಕೃತ್ಯ ನಡೆಸಿದ ಬಳಿಕ ಪೊಲೀಸರಿಗೆ ಕರೆ ಮಾಡಿ ಆರೋಪಿ ತಿಳಿಸಿದ್ದಾನೆ.
ಆರೋಪಿ ಈರಣ್ಣನನ್ನು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರಿಗೂ ವಿಪರೀತ ಕುಡಿತದ ಚಟವಿತ್ತು. ಸಾಲದ ವಿಚಾರದಲ್ಲಿ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ.