ಮೈಸೂರು: ದೇಶದಲ್ಲಿ 68 ಬಿಜೆಪಿ ಶಾಸಕರ ಸೆಕ್ಸ್ ಸಿಡಿ ಪ್ರಕರಣಗಳಿವೆ. ಕರ್ನಾಟಕದಲ್ಲಿಯೇ 14 ಶಾಸಕರ ಸಿಡಿಗಳಿವೆ ಎಂದು ಮೈಸೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಹೇಳಿಕೆ ನೀಡಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯ ಬಗ್ಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ಸೆಕ್ಸ್ ಸಿಡಿಗಳ ಬಗ್ಗೆ ಅವರೆಲ್ಲರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕ ಅಶೋಕ್ ಮಾಹಿತಿ ಪಡೆದುಕೊಳ್ಳಲಿ ಎಂದರು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡದ ಮೇಲೆ ನಂಬಿಕೆ ಇಲ್ಲದಿದ್ದರೆ ಸರಕಾರದ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ಸಿಬಿಐಗೆ ವಹಿಸುವಂತೆ ಮೈತ್ರಿ ಪಕ್ಷದ ಮೇಲೆ ಒತ್ತಡ ತರಲಿ’ ಎಂದರು. ಸಂಸದ ಪ್ರಜ್ವಲ್ ರೇವಣ್ಣ ವಿಧಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣವನ್ನು ಬಿಟ್ಟು ಪೆನ್ಡ್ರೈವ್ ಹಂಚಿದವರ ಬಗ್ಗೆ ಕೂಗಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕೊಲೆ ಮಾಡಿದವನನ್ನು ಬಿಟ್ಟು ಕತ್ತಿ ತಯಾರಿಸಿದವನಿಗೆ ಶಿಕ್ಷೆ ವಿಧಿಸುವಂತೆ ಆಗ್ರಹಿಸುವಂತಿದೆ,” ಎಂದು ಟೀಕಿಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
ಸಿಡಿ ರೂವಾರಿ, ನಾಯಕ, ನಿರ್ದೇಶಕ ಪ್ರಜ್ವಲ್ ರೇವಣ್ಣ, ವಿತರಕ ಕಾರ್ತಿಕ್ ಗೌಡ, ಊರವರಿಗೆ ಹಂಚಿದ್ದು ದೇವರಾಜೇಗೌಡ. ಆದರೆ, ಸಿಎಂ ಮತ್ತು ಡಿಸಿಎಂ ಮೇಲೆ ಯಾಕೆ ಆರೋಪ ಮಾಡುತ್ತಿದ್ದಾರೆ,” ಎಂದು ಪ್ರಶ್ನಿಸಿದರು. ಪ್ರಜ್ವಲ್ ರೇವಣ್ಣಗೆ 15 ನಿಮಿಷದಲ್ಲಿ ರಾಜತಾಂತ್ರಿಕ ಪಾಸ್ ಕೊಟ್ಟು ವೀಸಾ ಸಮೇತ ಮಧ್ಯರಾತ್ರಿ ದೇಶ ಬಿಟ್ಟು ಕಳುಹಿಸಿದ್ದು ಯಾರು? ಈ ಪ್ರಕರಣದಲ್ಲಿನರೇಂದ್ರ ಮೋದಿ, ಅಮಿತ್ ಶಾ ಡಬಲ್ ಸ್ಟ್ಯಾಂಡ್ ತೆಗೆದು ಕೊಳ್ಳುತ್ತಿದ್ದಾರೆ,” ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)