ಬೆಳಗಾವಿ: ಘಟಪ್ರಭಾ ನದಿಯ ಪ್ರವಾಹದ ಅಬ್ಬರಕ್ಕೆ ಬೆಳಗಾವಿಯ ಮಸಗುಪ್ಪಿ ಗ್ರಾಮ ಸಂಪೂರ್ಣವಾಗಿ ಜಲಾವೃತವಾಗಿದೆ. ಸಾವಿರಾರು ಮನೆಗಳ ಸುತ್ತಮುತ್ತ ಸಾಗರ ರೀತಿಯಲ್ಲಿ ನೀರು ಆವರಿಸಿಕೊಂಡಿದೆ. ಮಸಗುಪ್ಪಿ ಗ್ರಾಮದ ಸುತ್ತಮುತ್ತ ಗ್ರಾಮದ ಜಲಭಾಧೆಯಲ್ಲಿ ಜರ್ಜರಿತವಾಗಿದೆ. ನೀರು ಆವರಿಸಿದ ಗ್ರಾಮದ ದೃಶ್ಯ ಗಳು ಪಬ್ಲಿಕ್ ಟಿವಿಯ ಡ್ರೋಣ ಕ್ಯಾಮರಾದಲ್ಲಿ ಸೆರೆಯಾಗಿವೆ.
ಖಾನಾಪುರ ಮತ್ತು ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿನ ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ.
ಮಲಪ್ರಭಾ ನದಿಗೆ ಅಡ್ಡಲಾಗಿ ಮುನವಳ್ಳಿ ಸಮೀಪ ಕಟ್ಟಲಾಗಿರುವ ನವೀಲುತೀರ್ಥ ಜಲಾಶಯ 2079.50 ಅಡಿ ಇದ್ದು ಈಗಾಗಲೇ 2072 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿಗೆ 7 ಅಡಿ ಬಾಕಿ ಇರುವುದರಿಂದ ಜಲಾಶಯದಿಂದ ನೀರು ಬಿಡಲಾಗಿದೆ. ಮಲಪ್ರಭಾ ನದಿಗೆ 20 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಹಾಗಾಗಿ ನವೀಲುತೀರ್ಥ ಜಲಾಶಯದಿಂದ 5000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.