ಉಡುಪಿ:– ಉಡುಪಿಯ ಕಾರ್ಕಳದಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯನ್ನು ಕರೆದೊಯ್ದಿರುವ ಘಟನೆ ಜರುಗಿದೆ.
Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ!
ಘಟನೆ ಬೆನ್ನಲ್ಲೇ ಇಡೀ ಕಾರ್ಕಳದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಬೆಳಗ್ಗೆ ಕಾರಿನಲ್ಲಿ ಹಿಂದೂ ಯುವತಿಯನ್ನು ಮುಸ್ಲಿಂ ಯುವಕನೋರ್ವ ಕಾರಿನಲ್ಲಿ ಕರೆದೊಯ್ದಿದಿದ್ದ ಎನ್ನಲಾಗಿದೆ. ಇದರ ಬೆನ್ನಲ್ಲೇ ಹಿಂದೂ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.
ಕಾರ್ಕಳದ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಲ್ತಾಫ್ ಎಂಬಾತ ಕಾರಿನಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡು ಹೋಗಿದ್ದ. ಸಂಜೆಯಾಗುತ್ತಲೇ ಯುವತಿಯನ್ನ ವಾಪಸ್ ಕರೆ ತಂದಿದ್ದ, ವಿಷಯ ತಿಳಿಯುತ್ತಿದ್ದಂತೆ ಕಾರು ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಇನ್ನು ಕಾರಿನಲ್ಲಿದ್ದ ಯುವತಿ ನಶೆಯಲ್ಲಿದ್ದುದ್ದನ್ನು ಕಂಡ ಹಿಂದೂ ಕಾರ್ಯಕರ್ತರು ಗರಂ ಆಗಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ. ಇನ್ನು ಯುವತಿ ಕಾರ್ಕಳದಲ್ಲಿ ಉದ್ಯೋಗವೊಂದರಲ್ಲಿ ಇದ್ದು, ಅಲ್ತಾಫ್ ಗೆ ಈಗಾಗಲೇ ಮದುವೆಯಾಗಿ ಮಕ್ಕಳಿರುವುದಾಗಿ ಆರೋಪ ಕೇಳಿಬಂದಿದೆ. ಕಾರ್ಕಳ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.