ಮಂಡ್ಯ:- ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಜನ ನನ್ನನ್ನು ಗೆಲ್ಲಿಸಿದ್ದಾರೆ. ಈ ಜಯ ನನ್ನದಲ್ಲಾ, ಜಿಲ್ಲೆಯ ಜನತೆಯದ್ದು, ಜಿಲ್ಲೆಯ ಜನ ನನ್ನ ಪರ ಪ್ರಚಾರ ಮಾಡಿ, ಚುನಾವಣೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷಾತೀತಾಗಿ ನನ್ನನ್ನು ಬೆಂಬಲಿಸಿದ್ದಾರೆ. ಹಾಗಾಗಿ ಈ ಜಯ ನನ್ನದಲ್ಲ, ಜಿಲ್ಲೆಯ ಜನರದ್ದು ಎಂದು ಫಲಿತಾಂಶ ಬರುವ ಮುನ್ನವೇ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೊಜ್ಜು ಕರಗಿಸಲು ಶಸ್ತ್ರಚಿಕಿತ್ಸೆ ಮೊರೆ ಹೋಗುವವರು ಈ ಸುದ್ದಿ ನೋಡಲೇಬೇಕು..!
ಸುಮಲತಾ ನನಗೆ ಬೆಂಬಲ ನೀಡುತ್ತಿಲ್ಲ ಎನ್ನುವುದರ ಬಗ್ಗೆ ದೇವೇಗೌಡ ಆ ರೀತಿ ಯಾಕೆ ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಅವರಿಗೆ ಮಾಹಿತಿ ಕೊರತೆ ಆಗಿರಬೇಕು ಎನಿಸುತ್ತಿದೆ. ಪಕ್ಷ ಭೇದ ಮರೆತು ಕಾಂಗ್ರೆಸ್,ಬಿಜೆಪಿ ನಾಯಕರು ಕಾರ್ಯಕರ್ತರು ನನ್ನ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಯಾರು ಕೂಡ ವಿರೋಧ ಮಾಡಿಲ್ಲ. ಎಲ್ಲರೂ ನನಗೆ ಸಹಾಯ ಮಾಡುತ್ತಿದ್ದಾರೆಂದು ಎಂದರು.
ಕುಮಾರಸ್ವಾಮಿ ಪರ ಪ್ರಚಾರಕ್ಕೆ ಯಾರು ನನ್ನ ಕರೆಯಲಿಲ್ಲ ಎಂಬ ಸುಮಲತಾ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ಅವ್ರ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೇನೆ ಇದಕ್ಕಿಂತ ಇನ್ನೇನು ಮಾಡಬೇಕು. ನಾನು ಮೈಸೂರಿನ ಮೋದಿ ಕಾರ್ಯಕ್ರಮದಲ್ಲೂ ಕೂಡ ಸುಮಲತಾ ಅವರನ್ನ 2 ದಿನ ಪ್ರಚಾರಕ್ಕೆ ಬರುವಂತೆ ಕೋರಿದ್ದೆ. ಗೊಂದಲದ ಪ್ರಚಾರ ಮಾಡೋದು ಬೇಡ. ಬೆಂಗಳೂರಿನಿಂದ ಬಂದು ಸುಮಲತಾ ನನಗೆ ಓಟ್ ಮಾಡಿದ್ದಾರೆ. ಅಂಬರೀಶ್ ಅಭಿಮಾನಿಗಳು ಸಹ ನನಗೆ ಸಹಾಯ ಮಾಡಿದ್ದಾರೆ. ಮಂಡ್ಯದಿಂದ ರಾಜ್ಯದಲ್ಲೇ ಅತ್ಯಂತ ಬಹುಮತಗಳಿಂದ ಗೆಲ್ಲಲಿದ್ದೇನೆ ಎಂದು ಗೊಂದಲಕ್ಕೆ ತೆರೆ ಎಳೆದರು.