ಮಡಿಕೇರಿ:- ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ಸಿಗುವ ಭರವಸೆ ಇದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ.
ಕಳೆದೆರಡು ವರ್ಷಗಳಿಂದ ಕೊಡುಗು ಜಿಲ್ಲೆಯ ಉಸ್ತುವಾರಿಯಾಗಿ ನಿಷ್ಠೆಯಿಂದ ದುಡಿದಿರುವುದಾಗಿ ಹೇಳಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿನ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವಲ್ಲಿ ತನ್ನ ಅಳಿಲು ಸೇವೆ ಇದೆ ಎಂದರು. ಟಿಕೆಟ್ ಸಿಕ್ಕಿದ್ದೇಯಾದರೆ ತಾನು ಇಟ್ಟುಕೊಂಡಿರುವ ವಿಶನ್ ಮತ್ತು ರಾಜ್ಯ ಸರ್ಕಾರ ನೀಡಿರುವ ಕಾರ್ಯಕ್ರಮಗಳ ಆಧಾರದಲ್ಲಿ ವೋಟು ಕೇಳುವುದಾಗಿ ಲಕ್ಷ್ಮಣ್ ಹೇಳಿದರು.
ದೆಹಲಿಯಲ್ಲಿ ಇಂದು ನಡೆದ ಸಭೆಯಲ್ಲಿ 8-9 ಸೀಟುಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿರುತ್ತದೆ ಮತ್ತು ಇವತ್ತೇ ಆ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ, ಉಳಿದ ಕ್ಷೇತ್ರಗಳಿಗೆ 15 ನೇ ತಾರೀಖಿನೊಳಗೆ ಹೆಸರುಗಳು ಅಂತಿಮಗೊಳ್ಳಲಿವೆ ಎಂದು ಎಂದು ಲಕ್ಷ್ಮಣ್ ಹೇಳಿದರು.