ಬೆಂಗಳೂರು: ಖಾಸಗಿ ಶಾಲೆಗಳಿಗೆ ನಾಡಗೀತೆ ವಿನಾಯ್ತಿ ಆದೇಶ ವಿಚಾರ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
Bigg Breaking: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಅಲ್ಲ: ಸರ್ಕಾರದಿಂದ ಮತ್ತೊಂದು ವಿವಾದಿತ ಆದೇಶ
ಈ ಬಗ್ಗೆ ಮಾತನಾಡಿದ ಅವರು, ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ ನಮ್ಮಗೆ ಎಲ್ಲಾ ಶಾಲೆಗಳು ಒಂದೇ ಆದೇಶ ಮಾಡಬೇಕಾದ್ರೆ ಸರ್ಕಾರಿ ಶಾಲೆ ಅನುದಾನಿತ ಶಾಲೆ ಅಂತಾ ಹಾಕಿದ್ದಾರೆ ಅದು ಎಲ್ಲಾ ಶಾಲೆಗಳು ಅಂತಾ ಹಾಕಿಸುತ್ತೇವೆ ನಮ್ಮ ಸರ್ಕಾರ ಕನ್ನಡ ಬಗ್ಗೆ ಕಾಳಜಿ ಇಟ್ಟಿದೆ ನಾವು ಬಹಳ ಸ್ಪಷ್ಟವಾಗಿ ಇದ್ದೇವೆ ಆದೇಶ ಪ್ರತಿಯ ಸಾಧಕ ಭಾದಕ ಹೇಳಬೇಕು ಮಾಧ್ಯಮ ಮಿತ್ರರಿಗೆ ಇದರ ಬಗ್ಗೆ ತಿಳಿಸಬೇಕು ಅಂತಾನೇ ಬಂದ ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ ಎಂದು ಸ್ಟಷ್ಟನೆ ನೀಡಿದರು.
ಹಾಗೆ ಶೇಕಡ 60 ಪರ್ಸೆಂಟ್ ಕನ್ನಡ ಫಲಕ ಹಾಕುವ ವಿಚಾರ ವಿಧಾನ ಸಭೆ, ಪರಿಷತ್ ಅಲ್ಲಿ ಚರ್ಚೆ ಆಗಿದೆ ಕನ್ನಡದಲ್ಲಿ ಬೋರ್ಡ್ ಹಾಕಬೇಕು ಅಂತಾ ಚರ್ಚೆ ಆಗಿದೆ ನಾನು ವಿಚಾರ ಮಾಡ್ತೇನೆ, ಕೆಲವರು ಸಲಹೆ ಕೊಟ್ಟಿದ್ದಾರೆ ಕೈಗಾರಿಗೆಗಳಲ್ಲಿ ಹೆಸರು ಹಾಕೋ ಡಿಸ್ಪ್ಲೇ ಹಾಕುವ ಪದ್ದತಿ ಬರ್ತಿದೆ
ಅದೇ ರೀತಿ ಭುವನೇಶ್ವರಿ ಪ್ರತಿಮೆ ನಿರ್ಮಾಣ ವಿಚಾರ ಅದರ ಬಗ್ಗೆ ಚರ್ಚೆ ಆಗ್ತಿದೆ ಆದಷ್ಟು ಬೇಗ ನಿಮ್ಮಗೆ ತಿಳಿಸುತ್ತೇವೆ ವಿಧಾನಸೌಧ ಮುಂಭಾಗದಲ್ಲಿ ಜಾಗ ಗುರುತಿಸಲಾಗಿದೆ ಆದಷ್ಟು ಬೇಗ ಇದರ ಬಗ್ಗೆ ಮಾಹಿತಿ ಒದಗಿಸುತ್ತೇವೆ ಎಂದು ಹೇಳಿದರು.