ಮಂಡ್ಯ: ಗಣೇಶನ ಮೆರವಣಿಗೆ ವೇಳೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣ ಧಗಧಗಿಸಿತ್ತು. ಈ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣದ ಸಂಬಂಧ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದೆ. ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ನಾಗಮಂಗಲ ಡಿವೈಎಸ್ಪಿ ಡಾ.ಸುಮೀತ್ ಅಮಾನತುಗೊಳಿಸಿ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ. ಡಾ.ಸುಮೀತ್ ಜಾಗಕ್ಕೆ ಪ್ರಭಾರ ಡಿವೈಎಸ್ಪಿ ಆಗಿ ಶಿವಮೂರ್ತಿ ಎಂಬುವವರನ್ನು ನೇಮಕ ಮಾಡಲಾಗಿದೆ.
40 ವರ್ಷ ದಾಟಿದ ಪುರುಷರು ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಗೊತ್ತಾ..?
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಾಗಮಂಗಲ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿತ್ತು. ಗಲಭೆಗೆ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಜಿಪುಣತನವೇ ಕಾರಣ ಎಂಬ ಅನುಮಾನ ಮೂಡಿತ್ತು. ರಿಜರ್ವ್ ಸಿಬ್ಬಂದಿಗೆ ಊಟ ಕೊಡಿಸಲು ಹಿಂದೇಟು ಹಾಕಿದ ಇನ್ಸ್ಪೆಕ್ಟರ್, ಭದ್ರತೆಗೆ ಬಂದಿದ್ದ ಡಿಎಆರ್ ಸಿಬ್ಬಂದಿನ ಬೆಳ್ಳೂರಿಗೆ ಶಿಫ್ಟ್ ಮಾಡಿದ್ದರು. ರಿಸರ್ವ್ ವಾಹನ ಹೊರಟ ಅರ್ಧ ಗಂಟೆಗೆ ಗಲಭೆ ನಡೆದಿತ್ತು. ಈ ವೇಳೆ ನಿರ್ಲಕ್ಷ್ಯ ತೋರಿದ ಅಶೋಕ್ ಕುಮಾರ್ನ ಸಸ್ಪೆಂಡ್ ಮಾಡಲಾಗಿತ್ತು.