ಕಲಬುರಗಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (AKBMS) ಕಲಬುರಗಿ ಜಿಲ್ಲಾ ಯುವ ಘಟಕದ ಸಂಚಾಲಕರಾಗಿ ನಾರಾಯಣ ಜಹಗೀಧರ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಬಗ್ಗೆ AKBMS ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿಯವರು ಮಾಧ್ಯಮ ಪ್ರಕಟಣೆ ನೀಡಿದ್ದು,
ಸಮಾಜದ ಏಳಿಗೆಯಲ್ಲಿ ಪಾಲ್ಗೊಂಡು ಸಂಘಟನೆ ದೃಷ್ಟಿಯಿಂದ ಅವಿರತವಾಗಿ ಶ್ರಮಿಸುವಂತೆ ಸಲಹೆ ನೀಡಿದ್ದಾರೆ..ಜಾಗೀರದಾರ್ ನೇಮಕದ ಬಗ್ಗೆ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಶ್ರೀಧರ್ ಸರಾಫ್ ಸೇರಿದಂತೆ ಅನೇಕ ಪ್ರಮುಖರು ಹಾರೈಸಿದ್ದಾರೆ.