ಗದಗ:- ನರೇಂದ್ರ ಮೋದಿಯವರು ಜಾತಿ ಹಿಡಿದು ರಾಜಕೀಯ ಮಾಡಿಲ್ಲ ಎಂದು ಗದಗದಲ್ಲಿ ಬಿಜೆಪಿ ಮುಖಂಡ ರವಿ ದಂಡಿನ ಪ್ರತಿಕ್ರಿಯೆ ನೀಡಿದ್ದಾರೆ.
ತೇಲಿ ಸಮಾಜ ಮೇಲ್ಜಾತಿ ಆದರೂ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಓಬಿಸಿಯಲ್ಲಿ ಸೇರಿಸಿದ್ದಾರೆ ಅಂತ ಮೋದಿ ವಿರುದ್ಧ ರಾಹುಲ್ ಗಾಂಧಿ ಆರೋಪ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗಲೇ ತೇಲಿ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿದೆ. ತೇಲಿ ಸಮಾಜ ಅಂದ್ರೆ ಕರ್ನಾಟಕದಲ್ಲಿ ಗಾಣಿಗ ಸಮಾಜ. ನರೇಂದ್ರ ಮೋದಿಯವರು ಜಾತಿ ಹಿಡಿದು ರಾಜಕೀಯ ಮಾಡಿಲ್ಲ. ಮೋದಿಯವರು ಆರ್.ಎಸ್.ಎಸ್.ನ ಕಾರ್ಯಕರ್ತರಾಗಿ ಸಣ್ಣಪುಟ್ಟ ಕೆಲಸ ಮಾಡಿ ಗುರ್ತಿಸಿಕೊಂಡು ಬೆಳೆದವರು
![Demo](https://ainlivenews.com/wp-content/uploads/2023/12/spoorthi-1.jpg)
ಗುಜರಾತ್ ಮುಖ್ಯಮಂತ್ರಿ ಆಗಿ, ಬಳಿಕ ಪ್ರಧಾನ ಮಂತ್ರಿ ಆಗಿದ್ದಾರೆ. ಅವರು ಯಾವತ್ತೂ ಜಾತಿ ವಿಷಯ ಎತ್ತಿಲ್ಲ. ಮೋದಿಯವರು ಯಾವಾಗಲೂ ಸಬ್ ಕಾ ಸಾಥ್, ಸಬ್ ಕಾ ವಿಕಾಸ ಅಡಿಯಲ್ಲಿ ಎಲ್ಲಾ ವರ್ಗಗಳನ್ನ ಒಗ್ಗೂಡಿಸುವ ಕೆಲಸ ಮಾಡ್ತಿದ್ದಾರೆ. ಮೋದಿಯವರ ಕಾಲದಲ್ಲಿಯೇ ಶಾಶ್ವತವಾಗಿ ಹಿಂದುಳಿದ ವರ್ಗಗಳ ಆಯೋಗ ರಚನೆ ಮಾಡಿದ್ದಾರೆ ಎಂದರು
![](https://ainlivenews.com/wp-content/uploads/2024/01/Ad-Banner-copy-scaled.jpg)