ರಾಯಚೂರು:- ನರೇಂದ್ರ ಮೋದಿ ಒಬ್ಬ ಸುಳ್ಳುಗಾರ ಎಂದು ಬಿಕೆ ಹರಿಪ್ರಸಾದ್ ವಾಗ್ದಾಳಿ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನರೇಂದ್ರ ಮೋದಿ ಪ್ರಧಾನ ಮಂತ್ರಿ ಅಲ್ಲ, ಪ್ರಧಾನ ಸುಳ್ಳುಗಾರ. ಅವರ ಪ್ರಣಾಳಿಕೆಯಲ್ಲಿ ಅಮೃತ್ ಕಾಲ್ ಎಂದು ಹೇಳಿದ್ದಾರೆ. ಆದರೆ ಇದು ಅನ್ಯಾಯದ ಕಾಲ ಎಂದರು.
ಮೋದಿ ಈ ಹಿಂದೆಯೂ ಅಚ್ಛೇ ದಿನ್ ಅಂತಾ ಹೇಳಿದ್ದರು. ಯುವಕರಿಗೆ ಸ್ಕಿಲ್ ಇಂಡಿಯಾ ಎಂದು ಹೇಳಿದರು. ಮೇಕ್ ಇನ್ ಇಂಡಿಯಾ ಅಂತಾ ಮಾಡಿದರು. ಆತ್ಮನಿರ್ಭರ್ ಅಂತಾ ಹೇಳಿದ್ರೂ ಏನೂ ಉಪಯೋಗ ಆಗಿಲ್ಲ. ಫಾರ್ಮರ್ ಹಬ್, ಹಾರ್ಟಿಕಲ್ಚರ್ ಹಬ್ ಮಾಡುತ್ತೇವೆ ಎಂದಿದ್ದರು. ಆದರೆ ಇದು ಅಮೃತ ಕಾಲ ಅಲ್ಲ, ಇದು ಅನ್ಯಾಯದ ಕಾಲ ಎಂದು ಹರಿಹಾಯ್ದರು.
ಜನ ಯಾವ ಪರಿಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ನಾವು ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಐದು ಪ್ರಮುಖ ಅಂಶಗಳೊಂದಿಗೆ ಪ್ರಣಾಳಿಕೆಯನ್ನು ಖರ್ಗೆ ನೇತೃತ್ವದಲ್ಲಿ ಬಿಡುಗಡೆ ಮಾಡಿದೆವು. ಇದು ಯುವಕ, ಮಹಿಳೆ ಸೇರಿದಂತೆ ಎಲ್ಲರಿಗೂ ಉಪಯೋಗವಾಗುತ್ತದೆ ಎಂದರು
2021ರ ಬಜೆಟ್ನಲ್ಲಿ 35,000 ಕೋಟಿ ವ್ಯಾಕ್ಸಿನ್ಗೆ ಇಟ್ಟಿದ್ದೇವೆ ಎಂದರು. ವ್ಯಾಕ್ಸಿನ್ಗೆ ದರ ನಿಗದಿಪಡಿಸಿದರು. ಸುಪ್ರೀಂ ಕೋರ್ಟ್ ಸುಮೊಟೊ ಕೇಸ್ ತೆಗೆದುಕೊಂಡಿತ್ತು. ಹೆಲ್ತ್ ಎಮರ್ಜೆನ್ಸಿ ಡಿಕ್ಲೇರ್ ಮಾಡಲಾಗಿದೆ. ಆದರೆ ಅದಕ್ಕೆ ರಿಸರ್ವ್ ಇರುವ ಹಣದ ಮಾಹಿತಿ ಕೊಡಿ, ಉಚಿತವಾಗಿ ಯಾಕೆ ವ್ಯಾಕ್ಸಿನ್ ಕೊಡ್ತಿಲ್ಲ ಎಂದು ಕೇಳಿತ್ತು. ನಂತರ ವ್ಯಾಕ್ಸಿನ್ ಉಚಿತವಾಗಿ ಕೊಟ್ಟರು ಎಂದು ಕಿಡಿಕಾರಿದರು