ಭಾರತ ತಂಡ ಇತ್ತೀಚೆಗೆ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಆ ಮೂಲಕ 11 ವರ್ಷಗಳ ಬಳಿಕ ಟೀಮ್ ಇಂಡಿಯಾ ಐಸಿಸಿ ಟ್ರೋಫಿ ಬರವನ್ನು ಬೀಗಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವನ್ನು ಮಾಜಿ ಆರಂಭಿಕ ಬ್ಯಾಟ್ಸ್ಮನ್ ನವಜೋತ್ ಸಿಂಗ್ ಸಿಧು ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ.
ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ವಿರಾಟ್ ಬಾಲ್ಯದ ಕೋಚ್ ಹೇಳಿದ್ದೇನು?
ಕ್ರಿಕೆಟ್ಗೆ ವಿದಾಯ ಹೇಳಿದ್ದ ವಿರಾಟ್ ಕೊಹ್ಲಿಯನ್ನು ವಿಶೇಷವಾಗಿ ನನಜೋತ್ ಸಿಧು ವಿಶೇಷವಾಗಿ ಕೊಂಡಾಡಿದ್ದಾರೆ. ಅಂದ ಹಾಗೆ ವಿರಾಟ್ ಕೊಹ್ಲಿ ಇದೇ ಮೊಟ್ಟ ಮೊದಲ ಬಾರಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡರು. ಅಷ್ಟೇ ಅಲ್ಲದೆ ಮಾಜಿ ನಾಯಕ ಎಂಎಸ್ ಧೋನಿ ಬಳಿಕ ಐಸಿಸಿಯ ಮೂರೂ ಸ್ವರೂಪದಲ್ಲಿ ಪ್ರಶಸ್ತಿ ಗೆದ್ದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. 2011ರ ಏಕದಿನ ವಿಶ್ವಕಪ್ ವಿಜೇತ ಹಾಗೂ 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಆಡಿದ್ದರು.
ಭಾರತೀಯರು ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲಬೇಕೆಂದು ಬಯಸಿದ್ದರು ಹಾಗೂ ಭಾರತವನ್ನು ಸಂಕಷ್ಟದಿಂದ ಪಾರು ಮಾಡಲು ಪ್ರಾರ್ಥಿಸಿದ್ದರು. ಅಂತಹ ಸಮಯದಲ್ಲಿ ವಿರಾಟ್ ಕೊಹ್ಲಿ ಭಾರತದ ಇನಿಂಗ್ಸ್ಗೆ ತಡೆಗೋಡೆಯಾಗಿ ನಿಂತರು. ಪ್ರಮುಖ ಬ್ಯಾಟ್ಸ್ಮನ್ಗಳು ವಿಫಲವಾದಾಗ, ಕಠಿಣ ಪರಿಸ್ಥಿತಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ನೊಂದಿಗೆ ತಂಡವನ್ನು ಉಳಿಸಿದರು. ಅಸಾಧಾರಣ ಪ್ರದರ್ಶನದ ಮೂಲಕ ಟೀಮ್ ಇಂಡಿಯಾವನ್ನು ವಿಶ್ವ ಚಾಂಪಿಯನ್ ಪಟ್ಟಕ್ಕೇರಿಸಿದರು,” ಎಂದು ನವಜೋತ್ ಸಿಂಗ್ ಸಿಧು ಶ್ಲಾಘಿಸಿದ್ದಾರೆ.