ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಪ್ರೀತಿ ಮಾಡಲು ನಿರಾಕರಣೆ ಮಾಡಿದಕ್ಕೆ ಫಯಾಜ್ ಎಂಬಾತ ಮಾರಕ ಅಸ್ತ್ರಗಳಿಂದ ಭೀಕರ ಹತ್ಯೆ ಮಾಡಿದು ಖಂಡಿಸಿ ಆರೋಪಿ ಫಯಾಜಗೆ ಕೂಡಲೇ ಗಲ್ಲು ಶಿಕ್ಷೆ ವಿಧಿಸಿ ಶಾಲಾ ಕಾಲೇಜಗಳೆಂದರೆ ಜ್ಞಾನದ ದೇಗುಲಗಳಿದ್ದಂತೆ ಇಂತಹ ದೇಗುಲದಲ್ಲಿ ಹಾಡು ಹಗಲೆ ವಿದ್ಯಾರ್ಥಿನಿಯಾದ ನೇಹಾ ಹಿರೇಮಠಳನ್ನು ಭೀಕರ ಹತ್ಯೆ ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ.
ಕೆಎಲ್ಇ, ತಾಂತ್ರಿಕ ವಿಶ್ವವಿದ್ಯಾಲಯದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಪ್ರೀತಿ ನಿರಾಕರಣೆ ಮಾಡಿದಕ್ಕೆ ಕ್ರೂರ ಮನಸ್ಥಿತಿಯ ಫಯಾಜ್ ಎಂಬಾತ ಲವ್ ಮಾಡದ ಕಾರಣ ಅವಳ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಈ ಪ್ರೀತಿಯನ್ನು ವಿದ್ಯಾರ್ಥಿಯ ಕಾಲೇಜಿಗೆ ಅಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ ಸುಮಾರು ಬಾರಿ ಇರದು ಬರ್ಬರವಾಗಿ ಹತ್ಯೆಗೈದಿದ್ದಾನೆ.
ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿನಿಯನ್ನು ಹತ್ತೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಹಾಡು ಹಗಲೇ ಕೃತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಎಷ್ಟು ಕುಸಿದು ಹೋಗಿದೆ, ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ.ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯ ಭೀತಗೊಂಡಿದೆ.
ಪೊಲೀಸರು ಕೂಡಲೇ ಸೂಕ್ತ ತನಿಕೆಯನ್ನು ಕೈಗೊಂಡು ಅಪರಾಧಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ ಜೊತೆಗೆ ರಾಜ್ಯಾದ್ಯಂತ ಪೊಲೀಸರು ಶಾಲಾ-ಕಾಲೇಜುಗಳ ಬಳಿ ಮಫ್ತಿಯಲ್ಲಿ ಕಾರ್ಯನಿರ್ವಹಿಸಿ ಸಂಭಾವ್ಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕು ಎಂದರು.ಘಟನೆಯಿಂದ ಸಮಾಜದಲ್ಲಿ ನಾಗರಿಕರು ತಲೆ ತಗ್ಗೇಸುವಂತಾಗಿದೆ.
ರಾಜ್ಯ ಸರ್ಕಾರದ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯ ಪ್ರವೃತ್ತಿಯಾಗಬೇಕು ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಕಾನೂನು ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ ಕಾಲೇಜ್ ಕ್ಯಾಂಪನಗಳು ಸುರಕ್ಷತೆಯ ಕೇಂದ್ರಗಳಾಗಬೇಕು ಮತ್ತು ಉನ್ನತ ಮಟ್ಟದ ತನಿಖೆ ಮಾಡಿ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿಈ ಪ್ರಕರಣದ ತನಿಖೆಯನ್ನು ಸಿಬಿಐ ಗೆ ಹತ್ತಾಂತರ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸರ್ಕಾರಕ್ಕೆ ಮನವಿ ಮಾಡಿದರು.ಇದೇ ಸಂದರ್ಭದಲ್ಲಿ ಕರವೇ ಜಿಲ್ಲಾಧಕ್ಷ ಚನ್ನಪ್ಪ ಪಾಟೀಲ. ರಬಕವಿ ಬನಹಟ್ಟಿ ತಾಲೂಕು ಅಧ್ಯಕ್ಷರು ಮಹಮ್ಮದ ಹುಸೇನ್ ಲೆಂಗ್ರೆ. ಶಹನೂರು ಗೋಲಬಾವಿ. ಮೌಲಾನ ಮೋಸಿನ ಗೋಕಾಕ. ಬುಡನ ಜಮಾದಾರ. ಶಾನೂರ ಮಾಲದಾರ. ಶ್ರೀಮತಿ ಅನುರಾಧಾ ಶಿರಗುಪ್ಪಿ. ಶ್ರೀಮತಿ ರೇಣುಕಾ ಗಾಡಿವಡ್ಡರ. ಹಸನ ಝಾರೆ.ಇರ್ಷಾದ ಮೊಮಿನ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು
ಪ್ರಕಾಶ ಕುಂಬಾರ