ಬೆಳಗಾವಿ:- ಇತ್ತೀಚೆಗೆ ಮುಸ್ಲಿಂ ಯುವಕನಿಂದ ಕೊಲೆ ಆಗಿದ್ದ ನೇಹಾ ಹೀರೆಮಠ್ ಅವರ ತಂದೆ ಇದೀಗ ಕಾಂಗ್ರೆಸ್ ಪರ ಪ್ರಚಾರಕ್ಕಿಳಿದಿದ್ದಾರೆ.
R Ashok: ತಪ್ಪು ಮಾಡಿರುವ ಪ್ರಜ್ವಲ್ ಗೆ ಶಿಕ್ಷೆ ಆಗಲೇಬೇಕು – ಆರ್ ಅಶೋಕ್..!
ಏಪ್ರಿಲ್ 18ರಂದು ನೇಹಾ ಹತ್ಯೆ ಆಯಿತು, ಆಗ ಸಚಿವೆ ಹೆಬ್ಬಾಳ್ಕರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು ಅಂದು ಘಟನೆಯ ವರದಿ ಪಡೆದ ಸಚಿವೆ ಹೆಬ್ಬಾಳ್ಕರ್ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್ ಅವರಿಗೆ ಮಾಹಿತಿ ನೀಡಿದ್ದರು. ನಮ್ಮ ಬೇಡಿಕೆಯಂತೆ ವಿಶೇಷ ಕೋರ್ಟ್ ರಚನೆ, ಸಿಐಡಿ ತನಿಖೆಗೆ ಸರ್ಕಾರ ಅಸ್ತು ಅಂದಿತ್ತು, ನುಡಿದಂತೆ ನಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ವಂದನೆ ಸಲ್ಲಿಸಲು ಬಂದಿದ್ದೇವೆ ಎಂದು ನಿರಂಜನ್ ಹಿರೇಮಠ್ ಹೇಳಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘಟನೆ ಬಳಿಕ ನಮ್ಮ ಕುಟುಂಬಕ್ಕೆ ಧೈರ್ಯ ತುಂಬಿದರು. ಘಟನೆ ಬಗ್ಗೆ ಪಕ್ಷಾತೀತ, ಧರ್ಮಾತೀತವಾಗಿ ಖಂಡನೆ ವ್ಯಕ್ತಪಡಿಸಿದವು. ನಮಗೆ ನೈತಿಕ ಬೆಂಬಲ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇವೆ. ವಿಧಾನಸೌಧದಲ್ಲಿ ಧ್ವನಿ ಎತ್ತುವುದಾಗಿಯೂ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.
ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಕೂಡ ನಮಗೆ ನೈತಿಕ ಬೆಂಬಲ ಸೂಚಿಸಿದ್ದರು. ಹೀಗಾಗಿ ಕಣದಲ್ಲಿರುವ ಮೃಣಾಲ್ ಹೆಬ್ಬಾಳ್ಕರ್ಗೆ ಈ ಕ್ಷೇತ್ರದ ಜನರು ಬೆಂಬಲಿಸಬೇಕು ಎಂದು ಮತಯಾಚನೆ ಮಾಡಿದರು. ನನ್ನ ಹೇಳಿಕೆಯಿಂದ ಯಾರೂ ಅನ್ಯತಾ ಭಾವಿಸಬಾರದು. ನನಗೆ ಬಿಜೆಪಿ ನಾಯಕರು ಕೂಡ ಬೆಂಬಲ ಸೂಚಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸೆಕ್ಸ್ ಸ್ಕ್ಯಾಂಡಲ್ ಬಗ್ಗೆಯೂ ಹೋರಾಟ ಮಾಡುತ್ತೇನೆ. ಸಾಕಷ್ಟು ಮಹಿಳೆಯರ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ದೌರ್ಜನ್ಯ ಎಸಗಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದ ಪ್ರಜ್ವಲ್ ರೇವಣ್ಣಗೆ ಕಠಿಣ ಶಿಕ್ಷೆ ಆಗಬೇಕು ಎಂದು ನಿರಂಜನ್ ಹಿರೇಮಠ್ ಆಗ್ರಹಿಸಿದರು