ಬೆಂಗಳೂರು: ಬೆಂಗಳೂರು ನಗರ ಮತ್ತು ಹೊರವಲಯದಲ್ಲಿ ನೀರಿನ ಬಿಕ್ಕಟ್ಟು ತೀವ್ರಗೊಂಡಿದೆ. (Bengaluru) ಬೇಸಿಗೆ ಆರಂಭ ಆಗುತ್ತಿದ್ದಂತೆ ಈ ವರ್ಷ ಕುಡಿಯುವ ನೀರಿನ ಸಮಸ್ಯೆ (Drinking Water Problem) ಹೆಚ್ಚಾಗಿದೆ
ನೀರಿನ ಅಭಾವ ಇರುವುದರಿಂದ ಬಹುತೇಕ ಪ್ರದೇಶದಲ್ಲಿ ನೀರು ಪಡೆಯಲು ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸಮಯ ನಿಗದಿ ಮಾಡಲಾಗಿದೆ
Bigg Breaking: ಪ್ರತಾಪ್ ಸಿಂಹಾಗೆ ಟಿಕೆಟ್ ಕೈ ತಪ್ಪು ಸಾಧ್ಯತೆ: ಮೈಸೂರಿನಿಂದ ಯದುವೀರ್ ಒಡೆಯರ್ ಸ್ಫರ್ಧೆ?
ಹಾಗಾಗಿ ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಮಂಡಳಿ ಹೊಸ ಪ್ಲಾನ್ ಮಾಡಿದ್ದು ಐಐಎಸ್ಸಿ ಸಹಯೋಗದಲ್ಲಿ ಬೆಂಗಳೂರಿನ ಎಂಟು ಕೆರೆಗಳಲ್ಲಿ ಫಿಲ್ಟರ್ ಬೋರ್ ವೆಲ್ ಅಳವಡಿಸಲು ತಯಾರಿ ನಡೆಸಿದೆ.ಅದರಂತೆ ಮೊದಲಿಗೆ ನಾಯಂಡಹಳ್ಳಿ ಕೆರೆ, ಚಿಕ್ಕ ಬಾಣವಾರ ಕೆರೆ, ವರ್ತೂರು ಕೆರೆ ಸೇರಿದಂತೆ ಎಂಟು ಕೆರಳ ನೀರನ್ನು 10 ರಿಂದ 15 ದಿನಗಳಲ್ಲಿ ಸಂಗ್ರಹಿಸಲಾಗುತ್ತಾದೆ
ತಜ್ಞರ ಪರೀಕ್ಷೆಯಲ್ಲಿ ನೀರು ಕುಡಿಯಲು ಯೋಗ್ಯವೆಂದು ವರದಿ ಬಂದರೇ, ಬಳಿಕ ಬೋರ್ವೆಲ್ ಕೊರೆಯಲಾಗುತ್ತದೆ. ನಂತರ ನೀರು ಶುದ್ಧೀಕರಣ ಮಾಡಿ, ಬಳಿಕ ಮನೆ ಮನೆಗೆ ಸರಬರಾಜು ಮಾಡಲಾಗುತ್ತದೆ ಎಂದು ಜಲಮಂಡಳಿ ತಿಳಿಸಿದೆ.