ಮಂಡ್ಯ : ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಮಂಡ್ಯದ ಪಾಂಡವಪುರದ ಶಿಂಡಬೋಗನಹಳ್ಳಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ರಾಧಿಕಾ 23 ಮೃತ ದುರ್ದೈವಿಯಾಗಿದ್ದಾಳೆ.
ಮೃತ ರಾಧಿಕಾ ಶಿಂಡಬೋಗನಹಳ್ಳಿಯ ಅಜಯ್ ಗೌಡ ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ದ.ಕಳೆದ ಕೆಲ ದಿನಗಳ ಹಿಂದಷ್ಟೆ ಮದುವೆಯಾಗಿದ್ದು, ಗ್ರಾಮದಲ್ಲಿ ಹಬ್ಬ ಇದ್ದ ಹಿನ್ನೆಲೆ ಶಿಂಡಬೋಗನಹಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಆದರೆ ಮನೆಗೆ ಸೇರಿಸಲು ಅಜಯ್ ಗೌಡ ಮನೆಯವರ ವಿರೋಧ ವ್ಯಕ್ತಪಡಿಸಿದ್ದರಿಂದಾಗಿ ಅವರ ಚಿಕ್ಕಪ್ಪನ ಮನೆಯಲ್ಲಿ ಇಬ್ಬರ ವಾಸ್ತವ್ಯವಿದ್ದರು. ಅಜಯ್ ಚಿಕ್ಕಪ್ಪನ ಮನೆಯಲ್ಲೇ ರಾಧಿಕಾ ನೇಣು ಬಿಗಿದ ಸ್ಥಿತಿಯಲ್ಲೇ ಶವ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.