ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election) ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮತ್ತೆ ಮಂಡ್ಯದಿಂದ (Mandya) ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಈ ಬಾರಿ ನಿಖಿಲ್ ಮಂಡ್ಯ ಕಣದಿಂದ ಹಿಂದಕ್ಕೆ ಸರಿದಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಬಿಜೆಪಿ (BJP) ಜೊತೆ ಜೆಡಿಎಸ್ (JDS) ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜಿಲ್ಲೆಯ ಜೆಡಿಎಸ್ ನಾಯಕರು ಮಂಡ್ಯದಿಂದಲೇ ನಿಖಿಲ್ ಸ್ಪರ್ಧೆ ಮಾಡಬೇಕೆಂದು ಒತ್ತಡ ಹೇರಿದ್ದರು. ಅಷ್ಟೇ ಅಲ್ಲದೇ ನಿಖಿಲ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎಂಂಬ ಮಾತು ಜೆಡಿಎಸ್ ವಲಯದಲ್ಲಿ ಕೇಳಿ ಬಂದಿತ್ತು. ಆದರೆ ಈಗ ಈ ಎಲ್ಲಾ ಮಾತುಗಳಿಗೆ ನಿಖಿಲ್ ಪೂರ್ಣವಿರಾಮ ಹಾಕಿದ್ದು ಮಂಡ್ಯದಿಂದ ಈ ಬಾರಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಮಂಡ್ಯದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ನಿಖಿಲ್ ಹೇಳುವುದರ ಹಿಂದೆ ಹಲವು ಅಂಶಗಳು ಇರಬಹುದು ಎಂದು ವಿಮರ್ಶಿಸಲಾಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಮಂಡ್ಯದಲ್ಲಿ ನಿಖಿಲ್ ಹೆಚ್ಚು ಸಕ್ರಿಯರಾಗಿರಲಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಬಿಟ್ಟು ರಾಮನಗರದಲ್ಲಿ ಸ್ಪರ್ಧಿಸಿ ಸೋತಿದ್ದರು
![](https://ainlivenews.com/wp-content/uploads/2024/01/Ad-Banner-copy-scaled.jpg)