ವಿಜಯಪುರ: ರಾಜ್ಯದಲ್ಲಿ ಯಾವುದೇ ಸಿಎಂ ಬದಲಾವಣೆ ಇಲ್ಲ. ಈ ಬಗ್ಗೆ ಯಾವ ಚರ್ಚೆನೂ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ, ನಮ್ಮ ಸರಕಾರ, ನಾವು ನಮ್ಮ ಮುಖಂಡರು, ನಮ್ಮ ವರಿಷ್ಠರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಸಿದ್ದರಾಮಯ್ಯ ಅತ್ಯಂತ ಜನಪ್ರಿಯ ಮುಖ್ಯಮಂತ್ರಿಗಳು ಮತ್ತು ಒಳ್ಳೆಯ ಆಡಳಿತಗಾರರು.
ಅವರ ಅಡಿ ಇಂತಹ ಚರ್ಚೆ ಮಾಡುವಂತಹದ್ದು ಅಪ್ರಸ್ತುತ, ಅನಾವಶ್ಯಕ, ಅನಗತ್ಯ ಎಂದು ಅಷ್ಟೇ ಹೇಳಬಲ್ಲೇ ನಾನು” ಎಂದರು. ಬೇರೆಯವರದ್ದು ಅವರ ವೈಯುಕ್ತಿಕ ಅಭಿಪ್ರಾಯ ಇರಬಹುದು. ಸ್ವಾಮೀಜಿಗಳದ್ದು ಇರಬಹುದು, ಅವರ ಜನಾಂಗದವರದು ಇರಬಹುದು. ಮತ್ತು ಇನ್ನೊಬ್ಬರದ್ದು ಇರಬಹುದು. ಅದು ಅವರವರ ಅಭಿಪ್ರಾಯ. ಸಿದ್ದರಾಮಯ್ಯ ಅವರು ನಮ್ಮ ರಾಜ್ಯದ ಮುಖ್ಯಮಂತ್ರಿ ಅಲ್ವಾ?
![Demo](https://ainlivenews.com/wp-content/uploads/2023/12/spoorthi-1.jpg)
ಅವರು ಇರಬೇಕಾ ಇಲ್ಲವಾ ಅನ್ನೋದನ್ನು ಚರ್ಚೆ ಮಾಡುವಂಥದ್ದು ಖಂಡಿತವಾಗಿಯೂ ನಾವು ಒಪ್ಪುವಂಥದ್ದಲ್ಲ. ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಇಲ್ಲ. ಈ ಬಗ್ಗೆ ಯಾವ ಚರ್ಚೆನೂ ಇಲ್ಲ” ಎಂದು ಸ್ಪಷ್ಟನೆ ನೀಡಿದರು. ಹೆಚ್ಚುವರಿ ಡಿಸಿಎಂ ಬೇಡಿಕೆ ವಿಚಾರಕ್ಕೆ, ಕಾಂಗ್ರೆಸ್ನಲ್ಲಿ ಯಾವುದೇ ಬಣದ ರಾಜಕೀಯ ಇಲ್ಲ. ರಾಜಣ್ಣ ಸಿದ್ದರಾಮಯ್ಯ ಅಭಿಮಾನಿ, ಅದಕ್ಕೆ ಹೇಳಿದ್ದಾರೆ. ನಾವೇನು ಮಾಡೋಕಾಗುವುದಿಲ್ಲ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)