ಕೋಲಾರ: ಪ್ರಧಾನಿ ಮೋದಿ ಜಾತಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ರಾಹುಲ್ ಗಾಂಧಿಗೆ ಬುದ್ಧಿ ಇಲ್ಲ ಎಂದರು. ಮೋದಿ ಜಾತಿ ಬಗ್ಗೆ ಮಾತಾಡಿ ಈಗಾಗಲೇ ಎರಡು ವರ್ಷ ಶಿಕ್ಷೆ ಆಗಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಮೋದಿ ಜಾತಿ ಒಬಿಸಿಗೆ ಸೇರಿದೆ. ಯಾರೋ ಬರೆದು ಕೊಟ್ಟಿದ್ದನ್ನು ರಾಹುಲ್ ಗಾಂಧಿ ಹೇಳಿದ್ದಾರೆ. ಬೇರೆ ವಿಚಾರ ಹೇಳಿ ಕೊಡುವವರೆಗೂ ಇದನ್ನೇ ಹೇಳುತ್ತಾರೆ ಎಂದರು.
ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ಟಿಕೆಟ್ ಹಂಚಿಕೆ ಬಗ್ಗೆ ಮಾತನಾಡಿದ ಜೋಶಿ, ಲೋಕಸಭೆ ಚುನಾವಣೆಗೆ ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಸಮಿತಿ ಮುಂದೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ ಎಂದರು. ಕೋಲಾರ ಬಿಜೆಪಿಯ ಬಲವಾದ ಕ್ಷೇತ್ರ. ಜೆಡಿಎಸ್ʼಗೆ ಕೋಲಾರ ಬಿಟ್ಟು ಕೊಡುವ ಬಗ್ಗೆ ತೀರ್ಮಾನ ಆಗಿಲ್ಲ. ಹೆಚ್ಡಿ ದೇವೇಗೌಡರ ಜೊತೆ ಮಾತನಾಡಿ ತೀರ್ಮಾನ ಮಾಡಲಾಗುತ್ತದೆ ಎಂದರು.
ರಕ್ತದೊತ್ತಡ ಕಾಡುತ್ತಿದೆಯೇ: ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ಸಿಗುತ್ತೆ ಪ್ರಯೋಜನ!
ಇನ್ನೂ ತಿನ್ನಲು ನಾನು, ಯುದ್ಧಕ್ಕೆ ನೀವು ಹೋಗಿ ಅಂತಾ ಸಿದ್ದರಾಮಯ್ಯ ಹೇಳುತ್ತಿದ್ದಾರೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ವಂಚನೆ ಮಾಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿದರು. ಹಣಕಾಸು ಆಯೋಗದ ಮುಂದೆ ಅವರ ಸಮಸ್ಯೆ ಹೇಳಲಿ ಎಂದರು.