ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಹಿರಿಯ ಶಾಸಕ ಆರ್. ಅಶೋಕ ಅವರ ಆಯ್ಕೆಯಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಶಾಸಕರಲ್ಲಿ ಇಲ್ಲ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಶನಿವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,ವಿರೋಧ ಪಕ್ಷದ ನಾಯಕನ ಆಯ್ಕೆ ಗೆ ಶಾಸಕರ ಅಪಸ್ವರ ಹಿನ್ನೆಲೆಯಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ಕೊಟ್ಟ ಅವರು,
ಭಾರತೀಯ ಜನತಾ ಪಕ್ಷದ ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಭಾರತೀಯ ಜನತಾ ಪಕ್ಷದ ಹಿರಿಯ ಕಿರಿಯ ಶಾಸಕರ ಅಭಿಪ್ರಾಯ ಸಂಗ್ರಹಿಸಿ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಿದೆ ಶುಕ್ರವಾರಬೆಳಿಗ್ಗೆ ಮೊದಲು ಶಾಸಕರನ್ನ ಪ್ರತ್ಯೇಕವಾಗಿ ಮಾತನಾಡಿಸಲಾಯಿತು ಈ ಸಂದರ್ಭದಲ್ಲಿ ವೀಕ್ಷಕರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಚ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ ಗೌತಮ ಆಗಮಿಸಿದ್ದರು.
ಯಾವುದೇ ಭಿನ್ನಾಭಿಪ್ರಾಯ ಬರದಂತೆ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ ಎಲ್ಲ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಕೇಂದ್ರದ ಹಿರಿಯ ನಾಯಕರಿಗೆ ರವಾನೆ ವಿರೋಧ ಪಕ್ಷದ ನಾಯಕನ ಆಯ್ಕೆ ಮೊದಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಯ ಮಂಡನೆ ಮಾಡಿದರು ಇದಕ್ಕೆ ಎಲ್ಲ ಶಾಸಕರು ಇದಕ್ಕೆ ವಿರೋಧ ಮಾಡದೇ ಅನುಮೋದನೆ ನೀಡಿದರು.
ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ ಇದರೊಂದಿಗೆ ಹಿರಿಯ ಶಾಸಕರಾದ ಆರ್ ಅಶೋಕ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರ ಸತತವಾಗಿ ಏಳು ಸಲ ಶಾಸಕರಾಗಿ ಆಯ್ಕೆಯಾದವರು ಹಿರಿಯ ಶಾಸಕರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಾಯಕ ಆಗಿದ್ದುಆರ್ . ಅಶೋಕ ನೇತೃತ್ವದಲ್ಲಿ ರಾಜ್ಯದ ಆಡಳಿತ ವೈಖರಿ ಕುರಿತು ಪ್ರಶ್ನೆರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ ಯಾವುದೇ ಜನಪರ ಕೆಲಸ ಆಗತಾ ಇಲ್ಲ ಕಾರಣ, ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಸಮರ್ಥವಾಗಿ ಮಾತನಾಡುತ್ತೇವೆ
ಯಾವುದೇ ರೀತಿಯ ಸರ್ಕಾರದ ಪರ ಸಾಪ್ಟ್ ಕಾರ್ನರ್ ಇಲ್ಲ ಎಂದರು. ಕ್ರಿಕೆಟ್ ವಿಶ್ಚ ಕಪ್ ಗೆದ್ದು ಬರಲಿ ಎಂದು ಹಾರೈಕೆ ಇನ್ನು
ಇದೇ ಸಂದರ್ಭದಲ್ಲಿ ಭಾರತ ತಂಡಕ್ಕೆ ಶುಭ ಹಾರೈಸಿದ ಶಾಸಕ ಮಹೇಶ ಟೆಂಗಿನಕಾಯಿ ನಾಳೆ ಅಹ್ಮದಾಬಾದ್ ನಲ್ಲಿ ನಡೆಯಲಿರುವ ಭಾರತ ಆಸ್ಟ್ರೇಲಿಯಾ ವಿಶ್ವ ಕಪ್ ಪಂದ್ಯ. ನಾಳಿನ ಪಂದ್ಯದಲ್ಲಿ ಭಾರತ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೇ 10 ಪಂದ್ಯಗಳಲ್ಲಿ ಭಾರತ ಗೆದ್ದಿದ್ದುನಾಳಿನ ಪಂದ್ಯದಲ್ಲಿ ಸಹ ಭಾರತ ಗೆಲ್ಲುತ್ತದೆರೋಹಿತ್ ಶರ್ಮಾ ನೇತೃತ್ವದಲ್ಲಿನ ತಂಡ ಒಳ್ಳೆಯ ಆಟ ಆಡಲಿದೆಭಾರತ ತಂಡಕ್ಕೆ ಶುಭ ಹಾರೈಸಿದರು. ಪಂದ್ಯ ಆಡಿ ಪ್ರೋತ್ಸಾಹ ಇನ್ನು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಕೇಲ ಸಮಯ ನೆಹರು ಮೈದಾನದಲ್ಲಿ ಕ್ರಿಕೆಟ್ ಆಡುವ ಮೂಲಕ ಭಾರತ ತಂಡಕ್ಕೆ ಪ್ರೋತ್ಸಾಹ ನೀಡಿದರು.