ಮೈಸೂರು;-ಮುಖ್ಯಮಂತ್ರಿ ಹುದ್ದೆ ಚರ್ಚೆ ಅಪ್ರಸ್ತುತ ಎಂದು ಕೆ ಎಚ್ ಮುನಿಯಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಬಜೆಟ್ಗಳನ್ನು ನೀಡಿರುವ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿ ಯಾವುದೇ ತಂಟೆ, ತರಕಾರು ಇಲ್ಲದೆಯೇ ಆಡಳಿತ ನಡೆಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಸದ್ಯಕ್ಕೆ ಅಪ್ರಸ್ತುತ ಎಂದರು.
![Demo](https://ainlivenews.com/wp-content/uploads/2023/12/spoorthi-1.jpg)
ಪ್ರಜಾಪ್ರಭುತ್ವದಲ್ಲಿ ರಾಜ್ಯದ 224 ಶಾಸಕರೂ ಮಂತ್ರಿ ಆಗಬೇಕು, ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಇರುವುದು ಸಹಜ. ಆಡಳಿತ ಪಕ್ಷದಲ್ಲಿ 136 ಶಾಸಕರಿದ್ದೇವೆ. ಹೀಗಾಗಿ ಸರ್ಕಾರದ ಸ್ಥಿರತೆಯನ್ನು ಪ್ರಶ್ನಿಸುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಬಂದೋಬಸ್ತ್ ಆಗಿ ಇರುತ್ತಾರೆ’ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)