ಬೆಂಗಳೂರು: ಕ್ರೌರ್ಯದ ಆಧಾರದಲ್ಲಿ ಪತಿ ಮೊದಲ ಬಾರಿ ಸಲ್ಲಿಸಿದ್ದ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತಗೊಂಡಿದ್ದರೆ, ಎರಡನೇ ಸಲ ಅರ್ಜಿ ಸಲ್ಲಿಸಲು ಕಾನೂನಿನಲ್ಲಿ ಯಾವುದೇ ಅಡ್ಡಿ ಇಲ್ಲಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪತಿಯೊಬ್ಬ ತನ್ನ ಮೊದಲನೇ ವಿವಾಹ ವಿಚ್ಛೇದನದ ಅರ್ಜಿ ತಿರಸ್ಕೃತಗೊಂಡ ನಂತರ ಸಲ್ಲಿಸಿದ್ದ ಎರಡನೇ ಅರ್ಜಿಯನ್ನು ಪುರಸ್ಕರಿಸಿದೆ. ಅಲ್ಲದೇ ವಿಚ್ಛೇದನ ಅರ್ಜಿ ತಿರಸ್ಕರಿಸಿದ್ದ ಮೈಸೂರಿನ ನ್ಯಾಯಾಲಯದ ಆದೇಶ ರದ್ದುಗೊಳಿಸಿ ವಿಚ್ಛೇದನ ಮಂಜೂರು ಮಾಡಿದೆ.
ಪತಿ ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ನ್ಯಾ. ಅನು ಸಿವರಾಮನ್ ಮತ್ತು ನ್ಯಾ. ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ಪೀಠ, ” ಒಂದು ವೇಳೆ ಪತಿ ತನ್ನ ಮಗನಿಗಾಗಿ ಕಾನೂನುಬದ್ಧವಾಗಿ ನಿರ್ವಹಿಸಬೇಕಾಗಿರುವ ಕರ್ತವ್ಯಗಳನ್ನು ಪಾಲನೆ ಮಾಡದಿದ್ದರೂ ಆತ ತನ್ನ ವಿರುದ್ಧ ಪತ್ನಿಯ ಮಾನಸಿಕ ಕೌರ್ಯ ಸಾಬೀತುಪಡಿಸಿದರೆ ಸಾಕು. ಆತನಿಗೆ ವಿವಾಹ ವಿಚ್ಛೇದನ ಮಂಜೂರು ಮಾಡಬೇಕಾಗುತ್ತದೆ,” ಎಂದು ಹೇಳಿದೆ.
Railway Jobs: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 56,000 ಸಂಬಳ
”ಪತಿ ಹಾಗೂ ಪತ್ನಿ ಪರಸ್ಪರ ಮಗುವಿನ ಸುಪರ್ದಿ ಮತ್ತು ನಿರ್ವಹಣೆ ವಿಚಾರವಾಗಿ ಸಹಮತಕ್ಕೆ ಬಂದಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿದರೆ ಪತ್ನಿಯು ಪತಿಯ ಅನೈತಿಕ ಸಂಬಂಧವನ್ನು ಸಾಬೀತುಪಡಿಸಿಲ್ಲ. ಜತೆಗೆ ಅರ್ಜಿದಾರರು ಹೇಳಿರುವಂತೆ ಪತ್ನಿಯು,
ಪತಿಯ ಕಚೇರಿಗೆ ಹೋಗಿ ಅವರ ಸಹೋದ್ಯೋಗಿಗಳ ಮುಂದೆ ಸಾಕಷ್ಟು ಹಿಯಾಳಿಸಿ ಮಾತನಾಡಿದ್ದಾರೆ. ಇದನ್ನು ಪಾಟೀ ಸವಾಲಿನಲ್ಲಿ ಪತ್ನಿ ನಿರಾಕರಿಸಿಲ್ಲ. ಇದನ್ನು ಪರಿಗಣಿಸಿದರೆ ಪತಿಯು ಪತ್ನಿಯಿಂದ ಮೌನಸಿಕ ಕ್ರೌರ್ಯ ಅನುಭವಿಸುತ್ತಿದ್ದೇನೆ ಎನ್ನುವ ವಾದದಲ್ಲಿಹುರುಳಿದೆ. ಹಾಗಾಗಿ, ಪತಿಗೆ ವಿಚ್ಛೇದನ ಮಂಜೂರು ಮಾಡಲಾಗುವುದು,” ಎಂದು ನ್ಯಾಯಪೀಠ ಆದೇಶಿಸಿದೆ.