ದಾವಣಗೆರೆ : ಟಿಕೆಟ್ ನೀಡಿದ ಬಳಿಕ ಏನೇ ಗೊಂದಲ ಇದ್ದರೂ ಮೋದಿ ಅವರನ್ನ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಕೆಟ್ ನೀಡಿದ ಬಳಿಕ ಏನೇ ಗೊಂದಲ ಇದ್ದರೂ ಮೋದಿ ಅವರನ್ನ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ.
ಟಿಕೆಟ್ ಘೋಷಣೆಯಾದ ಬಳಿಕ ಪ್ರತಿಯೊಂದು ಕಡೆ ಈ ರೀತಿಯ ಕೆಲ ಗೊಂದಲಗಳು ಇರುತ್ತವೆ. ಕಾಂಗ್ರೆಸ್ನಲ್ಲೂ ಟಿಕೆಟ್ ಘೋಷಣೆಯಾದ ಬಳಿಕ ಈ ರೀತಿಯ ಗೊಂದಲ ಎಲ್ಲ ಪಕ್ಷದಲ್ಲಿ ಸರ್ವೇ ಸಾಮಾನ್ಯ. ಕೆಲ ದಿನಗಳ ಬಳಿಕ ಎಲ್ಲವೂ ಸುಧಾರಣೆಯಾಗುತ್ತದೆ. ಇನ್ನು ನಮ್ಮ ಪಕ್ಷದಲ್ಲಿ ಯಾರೂ ಕೂಡ ರೆಬಲ್ ಆಗಿ ನಿಲ್ಲುವ ಪರಿಸ್ಥಿತಿ ಇಲ್ಲ ಎಂದು ಹೇಳಿದರು. ಕಾಂಗ್ರೆಸ್ಗೆ ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ. ಗತಿಗೆಟ್ಟ ಪಾರ್ಟಿಯಾಗಿ ಮಾರ್ಪಟ್ಟಿದೆ.
Bigg Update: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಜೈಲಿನಲ್ಲಿದ್ದ ಆರೋಪಿಯನ್ನೇ ವಶಕ್ಕೆ ಪಡೆದ NIA
ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಲು ಇಚ್ಛಿಸಿ ಇಡೀ ದೇಶದಲ್ಲಿ 400ಕ್ಕೂ ಹೆಚ್ಚು ಸೀಟು ಗೆಲ್ಲುವ ಸಲುವಾಗಿ, ದಾವಣಗೆರೆಗೆ ಗಾಯಿತ್ರಿ ಸಿದ್ದೇಶ್ವರ್ ಅವರಿಗೆ ಟಿಕೆಟ್ ಕೊಡಲಾಗಿದೆ ಎಂದರು. ಅತೃಪ್ತ ಬಣದ ನೇತೃತ್ವ ವಹಿಸಿರುವ ಎಂ.ಪಿ ರೇಣುಕಾಚಾರ್ಯ ಸೇರಿದಂತೆ ಎಸ್. ಎ ರವೀಂದ್ರನಾಥ್ ಕೂಡ ಹಿರಿಯರು. ಇಬ್ಬರೊಂದಿಗೆ ಮಾತನಾಡುತ್ತೇನೆ. ಇನ್ನು ಈ ಹಿಂದೆ ಎಂ ಪಿ ರೇಣುಕಾಚಾರ್ಯ ಸಿದ್ದೇಶ್ವರ್ ಅವರ ಶಿಷ್ಯ. ಕಳೆದ ಚುನಾವಣೆ ಗೊಂದಲದಿಂದ ಹೀಗೆ ಆಗಿದೆ ಎಂದು ಹೇಳಿದರು.