ಬೆಂಗಳೂರು: “ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.
ಕೋಲಾರ ಟಿಕೆಟ್ ವಿಚಾರವಾಗಿ ಶಾಸಕರ ರಾಜೀನಾಮೆ ನೀಡಲು ಮುಂದಾಗಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ;
ನಾಮಪತ್ರ ಸಲ್ಲಿಕೆಗೂ ಮುನ್ನ ಡಿ.ಕೆ. ಶಿವಕುಮಾರ್ ಆಶೀರ್ವಾದ ಪಡೆದ ಡಿ.ಕೆ.ಸುರೇಶ್! Video Viral
“ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ತಯಾರಿ ಬಗ್ಗೆ ಕೇಳಿದಾಗ, “ಇಂದು ಡಿ.ಕೆ. ಸುರೇಶ್ ಅವರಿಗೆ ಬಿ ಫಾರಂ ನೀಡಿ, ನಮ್ಮ ಮನೆ ದೇವರು ಕೆಂಕೇರಮ್ಮ, ಕಬ್ಬಾಳಮ್ಮ, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಗುವುದು. ನಂತರ ರಾಮನಗರದಲ್ಲಿ ಮುಖ್ಯಮಂತ್ರಿಗಳ ಜತೆಗೂಡಿ ಕಾರ್ಯಕರ್ತರ ಸಭೆ ಮಾಡಿ ನಂತರ ಸುರೇಶ್ ಅವರ ನಾಮಪತ್ರ ಸಲ್ಲಿಸಲಾಗುವುದು.