ಬೆಂಗಳೂರು:- ಕಾರು, ಚಿನ್ನಾಭರಣ ತರೋವರೆಗೂ ಪ್ರಸ್ಥ ಶಾಸ್ತ್ರ ಮಾಡಲ್ಲವೆಂದು ಪಟ್ಟು ಹಿಡಿದ ಪತಿಯ ವಿರುದ್ಧ ಪೊಲೀಸರಿಗೆ ಪತ್ನಿ ದೂರು ನೀಡಿದ್ದಾರೆ.
ನೆಲಮಂಗಲದ 24 ವರ್ಷದ ವಧು ಬೆಂಗಳೂರಿನ ವರ್ತೂರಿನ ಪತಿ ಕಿರಣ್ ಸೇರಿದಂತೆ ಮನೆಯವರ ಮೇಲೆ ವರದಕ್ಷಿಣೆ ಪ್ರಕರಣ ದಾಖಲಿಸಿದ್ದಾರೆ.
ಬ್ಯಾಟಿಂಗ್ ಅಷ್ಟೇ ಅಲ್ಲ ಬೌಲಿಂಗ್ನಲ್ಲೂ ವಿಶೇಷ ದಾಖಲೆ ಬರೆದ ಹಿಟ್ ಮ್ಯಾನ್!
ಕಳೆದ 2023 ಡಿಸೆಂಬರ್ 14 ರಂದು ವರ್ತೂರಿನ ಕಿರಣ್ ಜೊತೆ ಹಸೆಮಣೆ ಏರಿದ್ದರು. ಆದರೆ ಅದೇನಾಯ್ತೋ ಗೊತ್ತಿಲ್ಲ, ವರದಕ್ಷಿಣೆ ಆಸೆ ಅತಿಯಾಗಿದೆ. ಈ ಹಿನ್ನಲೆ ಕೈ ಹಿಡಿದ ಪತ್ನಿಗೆ ಕಾರು, ಮತ್ತಷ್ಟು ಚಿನ್ನಾಭರಣ ತರೋವರೆಗೂ ಪ್ರಸ್ಥ ಶಾಸ್ತ್ರ ಮಾಡಲ್ಲವೆಂದು ಪಟ್ಟು ಹಿಡಿದಿದ್ದಾರೆ. ಜೊತೆಗೆ ಆಕೆಯ ಮೊಬೈಲ್ ಫೋನ್ ಕಿತ್ತುಕೊಂಡು ರೂಂನಲ್ಲಿ ಕೂಡಿಹಾಕಿ ಮಾನಸಿಕ ಹಿಂಸೆ ಕೊಟ್ಟಿದ್ದಾರೆ.
ವರದಕ್ಷಿಣೆ ತಂದುಕೊಟ್ಟರೆ ನಾನು ಪ್ರಸ್ಥ ಕಾರ್ಯವನ್ನು ಮಾಡಿಕೊಳ್ಳುತ್ತೇನೆ, ಇಲ್ಲವಾದಲ್ಲಿ ನಾನು ಮತ್ತೊಂದು ಮದುವೆಯನ್ನು ಮಾಡಿಕೊಳ್ಳುತ್ತೆನೆ ಎಂದು ಪತಿ ಕಿರಣ್ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲ, ತವರು ಮನೆಗೆ ಹೊರಟು ಹೋಗುವಂತೆ ಬೈದು ದೈಹಿಕವಾಗಿ ಹಿಂಸೆ ನೀಡಿದ್ದ. ಇನ್ನು ಇತ SSLC ಓದಿ, MBA ಓದಿದ್ದೇನೆ, ನನಗೆ MG ರೋಡ್ ನಲ್ಲಿ ದೊಡ್ಡ ಕಂಪನಿಯಲ್ಲಿ ಕೆಲಸವಿದೆ ಎಂದು ನಂಬಿಸಿದ್ದರಂತೆ.
ಇನ್ನು ನನಗೆ ಆಗಿರುವ ಅನ್ಯಾಯಕ್ಕೆ ಮಹಿಳಾ ಆಯೋಗದಲ್ಲಿ ದೂರು ಕೊಟ್ಟರೂ ಕೌನ್ಸಿಲ್ ಬಾರದೆ ನಾಪತ್ತೆಯಾಗಿದ್ದಾರೆ. ಈ ಹಿನ್ನಲೆ ಪತಿ ಕಿರಣ್, ಮಾವ ಸೀನಾಪ್ಪ, ಅತ್ತೆ ಶಶಿಕಲಾ, ಸಂಬಂಧಿ ಮನೋಜೆ ವಿರುದ್ಧ ನವ ವಿವಾಹಿತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.