ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್ ಗೆ ನನ್ನ ಬೆಂಬಲ ಇಲ್ಲ. ಈತ ಕಾಂಗ್ರೆಸ್ಸಿಗೆ ಬಂದು ಕೇವಲ ಆರು ತಿಂಗಳಾಗಿದೆ. ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಕುಟುಂಬ ಆರಂಭದಿಂದಲೂ ಹತ್ತಾರು ವರ್ಷಗಳಿಂದ ಕಾಂಗ್ರೆಸ್ಸಿನಲ್ಲಿದೆ. ಪ್ರಭಾ ಮಲ್ಲಿಕಾರ್ಜುನ್ ಅತ್ಯಂತ ಉತ್ತಮ ಅಭ್ಯರ್ಥಿ. ಇವರನ್ನು ಗೆಲ್ಲಿಸಿದರೆ ನಾನೇ ಗೆದ್ದ ಹಾಗೆ.
Car airbags: ನಿಮ್ಮ ಕಾರಿನಲ್ಲಿರುವ ಏರ್ʼಬ್ಯಾಗ್ ಅಸಲಿಯೋ, ನಕಲಿಯೋ ತಿಳಿಯುವುದೇಗೆ ಗೊತ್ತಾ..? ಈ ಸ್ಟೋರಿ ನೋಡಿ
ಪಕ್ಷೇತರನಾಗಿ ಸ್ಪರ್ಧಿಸುವುದಿಲ್ಲ ಎಂದು ನನ್ನ ಮತ್ತು ಕನಕಗುರುಪೀಠದ ಶ್ರೀ ನಿರಂಜನಾನಂದಪುರಿ ಶ್ರೀಗಳ ಎದುರು ಒಪ್ಪಿಕೊಂಡು ಹೋಗಿದ್ದ ಈತ ಆಮೇಲೆ ಉಲ್ಟಾ ಹೊಡೆದು ನಮ್ಮಿಬ್ಬರಿಗೂ ಮಾತು ತಪ್ಪಿದ್ದಾನೆ. ವಿನಯ್ ಗೆ ಬಿಜೆಪಿ ಕುಮ್ಮಕ್ಕು ಕೊಡುತ್ತಿದೆ. ಏಕೆಂದರೆ ಈತನ ಸ್ಪರ್ಧೆಯಿಂದ ಲಾಭ ಆಗುವುದು ಬಿಜೆಪಿಗೆ. ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ಮುಖ್ಯಮಂತ್ರಿಯಾಗಿ ನನಗಿನ್ನೂ ಹೆಚ್ಚಿನ ಶಕ್ತಿ ಬರುತ್ತದೆ ಎಂದು ವಿನಯ್ ಕುಮಾರ್ ನನ್ನು ಸೋಲಿಸಲು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು