ನವದೆಹಲಿ: ಅಗ್ನಿವೀರ್ನಂತಹ ಯೋಜಿತವಲ್ಲದ `ತುಘಲಕಿ’ ಯೋಜನೆ ತರುವ ಮೂಲಕ ಯುವಕರ ನೈತಿಕ ಸ್ಥೈರ್ಯವನ್ನು ಮೋದಿ ಸರ್ಕಾರ ಛಿದ್ರಗೊಳಿಸಿದೆ. ಇದರಿಂದಾಗಿ ಕೂಡಲೇ ಅಗ್ನಿವೀರ್ ಯೋಜನೆಯನ್ನು ರದ್ದು ಮಾಡಬೇಕು ಎಂದು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅಗ್ರಹಿಸಿದ್ದಾರೆ.
ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಕೇವಲ ಘೋಷಣೆಗಳನ್ನು ನೀಡುವುದರಲ್ಲಿ ನಿಪುಣರಾಗಿದ್ದಾರೆ. ಕಳೆದ ವರ್ಷದಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಆದರೆ ಪ್ರಧಾನಿ ಮೋದಿ ಅಲ್ಲಿಗೆ ಭೇಟಿ ನೀಡಿಲ್ಲ. ವಿರೋಧ ಪಕ್ಷಗಳು ಜನಸಾಮಾನ್ಯರ ಸಂಕಷ್ಟದ ಬಗ್ಗೆ ಮಾತನಾಡುತ್ತವೆ.
![Demo](https://ainlivenews.com/wp-content/uploads/2023/12/spoorthi-1.jpg)
ಚೆನ್ನೈನ ಐಫೋನ್ ಫ್ಯಾಕ್ಟರಿಯಲ್ಲಿ ವಿವಾಹಿತರಿಗೆ ನೋ ಎಂಟ್ರಿ..! ಏನಿದು ವಿವಾದ?
ಆದರೆ ಮೋದಿ ಕೇವಲ `ಮನ್ ಕಿ ಬಾತ್’ ಮಾಡುತ್ತಾರೆ. ಪ್ರಧಾನಿ ಮೋದಿಯವರು ಚುನಾವಣಾ ಸಮಯದಲ್ಲಿ ತಮ್ಮ ಭಾಷಣದ ಮೂಲಕ ಸಮಾಜವನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಈ ಹಿಂದೆ ದೇಶದ ಯಾವ ಪ್ರಧಾನಿಯೂ ಈ ರೀತಿ ಮಾಡಿರಲಿಲ್ಲ ಎಂದು ಅವರು ಕಿಡಿಕಾರಿದ್ದಾರೆ. ದ್ರೌಪದಿ ಮುರ್ಮು ಅವರ ಸಂಸತ್ತಿನ ಭಾಷಣದಲ್ಲಿ ನಿರ್ದೇಶನ ಮತ್ತು ದೂರದೃಷ್ಟಿ ಇಲ್ಲ. ಈ ವರ್ಷ ರಾಷ್ಟ್ರಪತಿಗಳ ಮೊದಲ ಭಾಷಣ ಜನವರಿಯಲ್ಲಿ ಮತ್ತು ಎರಡನೆಯದು ಜೂನ್ನಲ್ಲಿ ನಡೆಯಿತು.
ಮೊದಲ ಭಾಷಣ ಚುನಾವಣೆಗೆ ಮತ್ತು ಎರಡನೆಯದು ಅದರ ಮತ್ತೊಂದು ಪ್ರತಿಯಾಗಿದೆ. ಅವರ ಭಾಷಣದಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳಿಗೆ ಏನೂ ಸಂದೇಶ ಇರಲಿಲ್ಲ. ಕಳೆದ ಬಾರಿಯಂತೆ ರಾಷ್ಟ್ರಪತಿಗಳ ಭಾಷಣದಲ್ಲಿ ದೂರದೃಷ್ಟಿ ಇಲ್ಲ. ಇದು ಕೇವಲ ಸರ್ಕಾರದ ಬಗ್ಗೆ ಮೆಚ್ಚುಗೆಯ ಮಾತುಗಳಿಂದ ಕೂಡಿತ್ತು ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)