ವಿಜಯವಾಡ:-ರಾಜಕೀಯದಲ್ಲಿ ಯಾರೂ ಶಾಶ್ವತವಾಗಿರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬೇರು ಮಟ್ಟದಿಂದ ಪಕ್ಷವನ್ನು ಸದೃಢವಾಗಿ ಕಟ್ಟಬಹುದು, ಕಾರ್ಯಕರ್ತರು ಬಲಿಷ್ಠರಾಗಿದ್ದರೆ ಪಕ್ಷ ಸದೃಢವಾಗಿರುತ್ತದೆ. ರಾಜಕೀಯದಲ್ಲಿ ಯಾರೂ ಕೂಡಾ ಶಾಶ್ವತವಾಗಿರಲು ಸಾಧ್ಯವಿಲ್ಲ ಎಂದರು.
![Demo](https://ainlivenews.com/wp-content/uploads/2023/12/spoorthi-1.jpg)
ತೆಲಂಗಾಣ ಚುನಾವಣೆಗಾಗಿ ನಾನು ಇಲ್ಲಿಗೆ ಬಂದಿದ್ದೇನೆ.ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸವಿದೆ. ತೆಲಂಗಾಣದಲ್ಲಿ ಬದಲಾವಣೆ, ಹೊಸ ಸರ್ಕಾರ ರಚನೆ ಬಗ್ಗೆ ದೊಡ್ಡ ಅಲೆ ಇದೆ.
ಎಲ್ಲಾ ರಾಜಕೀಯ ಪಕ್ಷಗಳ ಮೂಲ ಬೇರು ಕಾಂಗ್ರೆಸ್ ಪಕ್ಷವೇ ಆಗಿದೆ. ಅವರು ಬೇರೆ ಏನನ್ನೇ ಹೇಳಲಿ. ವೈಎಸ್ ಆರ್ ಕಾಂಗ್ರೆಸ್ ಕೂಡಾ ಏಕೆ ಕಾಂಗ್ರೆಸ್ ಅಂತಾ ಹೆಸರು ಇಟ್ಟುಕೊಂಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಈ ದೇಶವನ್ನು ಒಗ್ಗೂಡಿಸಿದ ಪಕ್ಷ ಕಾಂಗ್ರೆಸ್ ಎಂದು ತಿಳಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)