ಚಾಮರಾಜನಗರ: ಗೋ ಬ್ಯಾಕ್ ಸುನಿಲ್ ಬೋಸ್ ಎಂದು ಪೋಸ್ಟರ್ ಅಂಟಿಸಿರುವುದು ಬಿಜೆಪಿಯವರು, ಅವರೇ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಹೇಳಿದರು. ಚಾಮರಾಜ ನಗರದಲ್ಲಿ ಸುದ್ದಿ ಗಾರರೊಂದಿಗೆ ಅವರು ಮಾತನಾಡಿ, ಗೋ ಬ್ಯಾಕ್ ಅಂಥಾ ಯಾಕೆ ಹಾಕಿದ್ದಾರೆ, ನಾನು ಹೊರಗಿವನಾ? ಮರಳು ಮಾಫಿಯಾ ಕೇಸ್ ಕೋರ್ಟ್ ನಲ್ಲಿ ವಜಾ ಆಗಿದೆ. ಕ್ಲೀನ್ ಚಿಟ್ ಕೊಡಲಾಗಿದೆ, ಬಿಜೆಪಿಯವರಿಗೆ ಸವಾಲು ಹಾಕುತ್ತೇನೆ,
ನನ್ನ ವಿರುದ್ಧ ಮರಳು ದಂಧೆ ಆರೋಪ ಸಾಬೀತು ಮಾಡಿದರೇ ನಾನು ನಾಮಪತ್ರವನ್ನೇ ಸಲ್ಲಿಸುವುದಿಲ್ಲ ವಾಪಸ್ ಪಡೆಯುತ್ತೇನೆ ಎಂದರು.ಗೋ ಬ್ಯಾಕ್ ಬರೆದವರ ವಿರುದ್ಧ ದೂರು ಕೊಡ್ತೀನಿ. ಚುನಾವಣಾಧಿ ಕಾರಿಗಳಿಗೆ ದೂರು ಕೊಡಲಾಗುವುದು. ಮಾಧ್ಯಮವರು ಹೇಳಿದ ಮೇಲೆ ಗೋ ಬ್ಯಾಕ್ ವಿಚಾರ ಗಮನಕ್ಕೆ ಬಂದಿದೆ, ಬಿಜೆಪಿಯವರು ಈ ಅಪಪ್ರಚಾರ ಮಾಡಿದ್ದಾರೆ ಎಂದು ಕಿಡಿಕಾರಿದರು. ಕರ್ನಾಟಕದಲ್ಲಿ ಮೋದಿ ಹವಾ ಇಲ್ಲಾ, ಕಾಂಗ್ರೆಸ್ ಈ ಬಾರಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.