ಮಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಈಗ ಕಾಂಗ್ರೆಸಿಗರು ಬಿಜೆಪಿ ಗೆದ್ದಲ್ಲಿ ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ, ನಿಷ್ಪಕ್ಷಪಾತ ಚುನಾವಣೆಗೆ ಎಸಗುವ ಅಪಚಾರವಾಗಿದೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದರು. ಇಂತಹ ಅಪನಂಬಿಕೆ ಮೂಡಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಮುಂದೆ ಚುನಾವಣೆಗೆ ಸ್ಪರ್ಧಿಸದಂತೆ ನಿಬಂಧನೆ ವಿಧಿಸಬೇಕು ಎಂದು ಸಿ.ಟಿ.ರವಿ ಆಗ್ರಹಿಸಿದರು.
Samantha: ಜೀನ್ಸ್’ನಲ್ಲಿ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟ ಸಮಂತಾ..! ಫೋಟೋಸ್ ನೋಡಿ
ಮೂರು ರಾಜ್ಯಗಳ ಚುನಾವಣಾ ಜನಾದೇಶ ಬಿಜೆಪಿಗೆ ಸೆಮಿ ಫೈನಲ್ ಗೆಲವು ಮಾತ್ರವಲ್ಲ, ಫೈನಲ್ ಗೆಲವು ಕೂಡ ನಮ್ಮದೇ ಎಂದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಡಿಎನ್ಎ ಸಂಘ ಪರಿವಾರದ್ದೇ ಹೊರತು ಕಾಂಗ್ರೆಸ್ ನದ್ದಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರ ಚಿಕ್ಕಪ್ಪ ಜನ ಸಂಘ ದಿಂದ ಗೆದ್ದಿದ್ದರು. ಶೆಟ್ಟರ್ ಸಹ ಬಿಜೆಪಿಯಿಂದಲೇ ಗೆದ್ದು ಅಧಿಕಾರ ಅನುಭವಿಸಿದವರು. ಈಗ ಕಾಂಗ್ರೆಸ್ ಸೇರಿಕೊಂಡು ಏನೇನೋ ಮಾತನಾಡುತ್ತಿದ್ದಾರೆ ಎಂದು ದೂರಿದರು.