ಬೆಂಗಳೂರು :- ಎಸ್ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಪ್ರಜ್ವಲ್ ರೇವಣ್ಣನನ್ನು ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ಇದೀಗ ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯವು ಜೂನ್ 24 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ ನಂತರ ಸೆಂಟ್ರಲ್ ಜೈಲಿಗೆ ಕರೆತರಲಾಗಿತ್ತು. ನಿನ್ನೆ ಸೆಂಟ್ರಲ್ ಜೈಲಿನಲ್ಲಿ ಪ್ರಜ್ವಲ್ ಒಂದು ರಾತ್ರಿ ಕಳೆದಿದ್ದು, ಆದರೆ ನಿದ್ದೆ ಸರಿಯಾಗಿ ಒದ್ದಾಡಿದ್ದಾರೆ, ಈ ಪ್ರಕರಣದಿಂದ ಕುಟುಂಬದ ಜೊತೆಗೆ ತನಗಾದ ಸಮಸ್ಯೆ ಹಾಗೂ ಸೋಲಿನಿಂದ ಹತಾಶೆಗೊಳಗಾಗಿರೋ ಪ್ರಜ್ವಲ್ ಕಂಗೆಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ತನ್ನ ಅಪ್ಪ ಎಚ್ಡಿ ರೇವಣ್ಣ ಇದ್ದ ಕ್ವಾರಂಟೈನ್ ಸೆಲ್ನಲ್ಲೇ ಪ್ರಜ್ವಲ್ ರೇವಣ್ಣನಿಗೂ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಡಲಾಗಿದ್ದು, ವಿಚಾರಣಾಧೀನಾ ಕೈದಿ ನಂಬರ್ 5664 ಅನ್ನು ಅಧಿಕಾರಿಗಳು ಕೊಟ್ಟಿದ್ದಾರೆ. ರಾತ್ರಿ ಜೈಲೂಟ ಚಪಾತಿ ಅನ್ನ ಸಾಂಬರ್ ಮಾಡಿದ್ದು, ಆದರೆ ರಾತ್ರಿ ನಿದ್ರೆ ಮಾಡದೆ ಬ್ಯಾರಕ್ನಲ್ಲಿ ಪ್ರಜ್ವಲ್ ರೇವಣ್ಣ ಓಡಾಟ ನಡೆಸಿದ್ದಾನೆ. ಸದ್ಯ ಯಾವ ಸಿಬ್ಬಂದಿ ಅಧಿಕಾರಿಗಳ ಜೊತೆ ಮಾತನಾಡದೆ ತನ್ನಷ್ಟಕ್ಕೇ ತಾನೇ ಇದ್ದಾರೆ ಎಂದು ತಿಳಿದು ಬಂದಿದೆ.
ಅಷ್ಟೇ ಅಲ್ಲದೇ ಈ ಪ್ರಕರಣದಲ್ಲಿ ತನ್ನ ಕುಟುಂಬಕ್ಕೆ ಮುಜುಗರ ಹಾಗೂ ತಂದೆಯ ಬಂಧನ, ತಾಯಿಯ ವಿಚಾರಣೆ ಹಾಗೂ ತಾನೂ ಬಂಧನಕ್ಕೊಳಗಾಗಿ ಜೈಲುವಾಸ ಅನುಭವಿಸುತ್ತಿರುವ ಬಗ್ಗೆ ಪ್ರಜ್ವಲ್ ರೇವಣ್ಣ ತೀವ್ರ ಹತಾಶೆಗೊಳಗಾಗಿದ್ದು, ಹಾಸನದಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದೂ ಸೋಲಾಗಿದ್ರಿಂದ ಭವಿಷ್ಯದ ಬಗ್ಗೆ ಮತ್ತಷ್ಟು ಚಿಂತೆಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.