ಚಾಮರಾಜನಗರ:- ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಮಹಿಳಾ ಸಿಬ್ಬಂದಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹಿನ್ನೆಲೆ, ನ್ಯಾಯಾಂಗ ಬಂಧನದಲ್ಲಿರುವ ಪ್ರಾಧಿಕಾರದ ಮಹಾದೇವಸ್ವಾಮಿ ಅಲಿಯಾಸ್ ಚಿಕ್ಕಿನಉಂಡೆ ಎಂಬುವರನ್ನು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಮಹದೇವಸ್ವಾಮಿ ಆಲಿಯಾಸ್ ಚಿಕ್ಕಿನಉಂಡೆ ಮಹಿಳಾ ನೌಕರರೊಂದಿಗೆ ಬಹಳ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಮಹಿಳಾ ಸಿಬ್ಬಂದಿ ದೂರು ನೀಡಿದ್ದರು. ದೂರಿನ ಅನ್ವಯ ಮಹದೇವಸ್ವಾಮಿ ಮೇಲೆ ಐಪಿಸಿ 354 ಎ ಸಿ 504, 506 509 ಕಾನೂನಿನಡಿ ಪ್ರಕರಣ ದಾಖಲಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಈ ಮೇಲಿನ ಎಲ್ಲಾ ಕಾರಣಗಳ ಹಿನ್ನೆಲೆ ಅವಿಧೇಯತೆ, ದುರ್ನಡತೆ, ಅಸಮರ್ಥತೆ ಕರ್ತವ್ಯದಲ್ಲಿ ನಿರ್ಲಕ್ಷತೆ ಶ್ರೀ ಕ್ಷೇತ್ರದ ಪವಿತ್ರತೆಗೆ ದಕ್ಕೆ ಉಂಟು ಮಾಡಿರುವ ಮಹದೇವಸ್ವಾಮಿ ರವರನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯದತ್ತಿಗಳ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.