ಬಾಗಲಕೋಟೆ:– ಸರಕಾರಿ ಐಬಿಯಲ್ಲೇ ಅಧಿಕಾರಿಗಳಿಂದ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್, ಇಂಜಿನಿಯರ್ಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
MS ಧೋನಿ ಮುಂದಿನ ವರ್ಷವೂ ಐಪಿಎಲ್ ಆಡ್ತಾರೆ- ಸ್ಪಷ್ಟನೆ ಕೊಟ್ಟ CSK ಸಿಇಒ !
ಜಿಲ್ಲಾ ಪಂಚಾಯಿತಿ ಎಇಇ ಎಂ.ಎಸ್.ನಾಯಕ್, ಇಂಜಿನಿಯರ್ಗಳಾದ ರಾಮಪ್ಪ ರಾಠೋಡ್, ಗಜಾನನ ಪಾಟೀಲ್, ಜಗದೀಶ್ ನಾಡಗೌಡ, ಶ್ರೀಶೈಲ್ ಹೂಗಾರ್ ಹಾಗೂ ಜಮಖಂಡಿ ತಹಶೀಲ್ದಾರ್ ಸದಾಶಿವ ಎಂಬುವವರಿಗೆ ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ ಜಾನಕಿ ಅವರು ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ಕೆಲಸಕ್ಕೆ ಚಕ್ಕರ್ ಹೊಡೆದು ಗುತ್ತಿಗೆದಾರರ ಜೊತೆ ಸೇರಿ ಮದ್ಯಸೇವನೆ ಬಗ್ಗೆ ವಿಡಿಯೋ ಸಾಕ್ಷಿ ಸಮೇತ ದೂರುಗಳು ಸ್ವೀಕೃತವಾಗಿವೆ. ಮಾದರಿ ನೀತಿ ಸಂಹಿತೆ ಹಿನ್ನೆಲೆ ಸರ್ಕಾರಿ ವಸತಿ ಗೃಹಗಳಲ್ಲಿ ಹೊರಗಿನವರಿಗೆ ಅವಕಾಶ ಇರುವುದಿಲ್ಲ. ಆದರೂ ಸರ್ಕಾರಿ ವಸತಿ ಗೃಹಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದೀರಿ. ನಿಮ್ಮ ಅನುಮತಿ ಇಲ್ಲದೇ ಜಿಲ್ಲಾ ಪಂಚಾಯತಿ ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೇಗೆ ಸರ್ಕಾರಿ ವಸತಿ ಗೃಹಕ್ಕೆ ಹೋಗಿದ್ದಾರೆ?. 1951ರ ಕಲಂ 134ರ ಪ್ರಕಾರ ಯಾಕೆ ಕ್ರಮ ಜರುಗಿಸಬಾರದು. ಹೀಗಾಗಿ ನೋಟಿಸ್ ತಲುಪಿದ 24 ತಾಸಿನೊಳಗೆ ಉತ್ತರ ನೀಡಿ. ತಪ್ಪಿದ್ದಲ್ಲಿ ನಿಮ್ಮ ಮೇಲೆ ಶಿಸ್ತು ಕ್ರಮಕೈಗೊಳ್ಳುವುದಾಗಿ ನೋಟಿಸ್ ನೀಡಿದ್ದಾರೆ.