ಚಿಕ್ಕಮಗಳೂರು:- ಚುನಾವಣಾ ಹೊತ್ತಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತನನ್ನು ಗಡಿಪಾರು ಮಾಡಿ, ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ. ಚಿಕ್ಕಮಗಳೂರು ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಎಂಬುವರನ್ನು ಗಡಿಪಾರು ಮಾಡಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ.
Breaking: ನೇಹಾ ಹಿರೇಮಠ್ ಹತ್ಯೆ ಪ್ರಕರಣ…ಪೊಲೀಸರಿಂದ ಸ್ಥಳ ಮಹಜರು!
ಲೋಕಸಭೆ ಚುನಾವಣೆ ಹೊತ್ತಲ್ಲೇ ಅದರಲ್ಲೂ ಮತದಾನಕ್ಕೆ ಇನ್ನು ಎರಡೇ ದಿನ ಬಾಕಿ ಇರುವಾಗಲೇ ಹಿಂದೂ ಪರ ಸಂಘಟನೆ ಕಾರ್ಯಕರ್ತನನ್ನು ಗಡಿಪಾರು ಮಾಡಲಾಗಿದೆ. ಚಿಕ್ಕಮಗಳೂರು ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಎಂಬುವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ, ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ.
ಜಿಲ್ಲೆಯಲ್ಲಿ ಅಶಾಂತಿ ವಾತಾವರಣ ಸೃಷ್ಟಿಸುವ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ ಅಂತ ಚಿಕ್ಕಮಗಳೂರು ಜಿಲ್ಲಾಡಳಿತ ಹೇಳಿದೆ. ಬಿಜೆಪಿ ಪಕ್ಷದೊಂದಿಗೆ ಸೇರಿಕೊಂಡು ಅಶಾಂತಿ ವಾತಾವರಣ ಸೃಷ್ಟಿಸುವ ಕಾರಣ ನೀಡಲಾಗಿದೆ. ಮತದಾರರಿಗೆ ಹಣದ ಆಮಿಷ ಒಡ್ಡಿ, ಸ್ವತಂತ್ರವಾಗಿ ಮತದಾನ ಮಾಡಲು ಅಡ್ಡಿ ಉಂಟು ಮಾಡುವ ಹಿನ್ನೆಲೆಯಲ್ಲಿ ಗಡಿಪಾರು ಮಾಡಿದ್ದಾಗಿ ಚಿಕ್ಕಮಗಳೂರು ಜಿಲ್ಲಾಡಳಿತ ಹೇಳಿದೆ