ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರಿಂದ 350 ಮುತ್ತೈದೆಯರಿಗೆ ಉಡಿ ತುಂಬವ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಷಟಸ್ಥಲ ಬ್ರಹ್ಮ ವೀರ ಮಹಾಂತ ಶಿವಾಚಾರ್ಯರು ಮಹಾಂತೇಶ್ವರ ಮಠ ಚಿಣಮಗೇರಿ ವಹಿಸಿಕೊಂಡು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದೇವಣಗಾಂವ ಗ್ರಾಮದಲ್ಲಿ ತಾಯಂದಿರಿಗೆ ಉಡಿ ತುಂಬುವ ಕಾರ್ಯಕ್ರಮ ಮಾಡಿದ್ದು ತುಂಬಾ ಖುಷಿ ತಂದಿದೆ ಎಂದರು.
Non-veg Recipe: ಭಾನುವಾರದ ಬಾಡೂಟಕ್ಕೆ ಮನೆಯಲ್ಲೇ ಮಾಡಿ ಆಂಧ್ರ ಸ್ಟೈಲ್ ಸ್ಪೆಷಲ್ ಚಿಕನ್ ಕರಿ!
ಇನ್ನೂ ಗಡಿ ಕಾಯುವ ಸೈನಿಕರಿಗೆ, ನಾಡಿನ ರೈತರಿಗೆ, ಯಾವುದೇ ಕಷ್ಟಗಳು ಬರದಿರಲಿ, ಬಂದಿರುವಂತ ಕಷ್ಟಗಳನ್ನು ನೀಗಿಸುವಂಥ ಶಕ್ತಿಯನ್ನು ಮಹಾಂತೇಶ್ವರ ಹಾಗೂ ಮಹಾಲಕ್ಷ್ಮಿ ಕೊಟ್ಟು ಕಾಪಾಡಲಿ ಎಂದು ಹಾರೈಸಿದರು. ಇನ್ನೂ 2023-2024 ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ನಿವೃತ್ತಿ ಹೊಂದಿರುವ ಗುರುಗಳಾದ ಆನಂದ ಬಿಂಗೆ ಹಾಗೂ ಚಂದ್ರಕಾಂತ್ ಸಿಂಪಿ,
ಇವರಿಗೆ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಆಡಳಿತ ಮಂಡಳಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಹಾಲಕ್ಷ್ಮಿ ದೇವಸ್ಥಾನ ಆಡಳಿತ ಮಂಡಳಿ ಹಾಗೂ ದೇವಣಗಾಂವ ಗ್ರಾಮಸ್ಥರು ಮತ್ತು ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು…