ವಿಜಯನಗರ: ಮತ್ತೊಮ್ಮೆ ಮೋದಿ ಗೋಡೆಬರಹಕ್ಕೆ ವಿದೇಶಿಗರೂ ಸಹ ಫಿದಾ ಆಗಿದ್ದಾರೆ. ಹೌದು ವಿಜಯನಗರ ಬಿಜೆಪಿ ಯುವಮೋರ್ಚಾದಿಂದ ಹಂಪಿಯಲ್ಲಿ ನಡೆದ ಮತ್ತೊಮ್ಮೆ ಮೋದಿ ಗೋಡೆ ಬರಹ ಸಮಯದಲ್ಲಿ ನಡೆದ ಘಟನೆ ಇದಾಗಿದೆ. ಭಾರತವನ್ನು ವಿಶ್ವಗುರು ಆಗಿಸುವ ಸಲುವಾಗಿ ಪ್ರತಿಯೊಬ್ಬ ಯುವಕರು ಬಿಜೆಪಿ ಗೆಲುವಿಗೆ ಶ್ರಮಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಹೇಳಿದರು.
ಹಂಪಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ಚಲೋ ಹಾಗೂ ಮತ್ತೊಮ್ಮೆ ಮೋದಿ ಸರ್ಕಾರ ಗೋಡೆ ಬರಹ ಕಾರ್ಯಕ್ರಮದಲ್ಲಿ ಮಾತನಾಡಿದರು. ನರೇಂದ್ರ ಮೋದಿಯವರು ಸದೃಢ ರಾಷ್ಟ್ರ ನಿರ್ಮಾಣ ಗುರಿ ಇಟ್ಟುಕೊಂಡು ಸತತ ಎರಡು ಬಾರಿ ಈ ದೇಶದ ಪ್ರಧಾನಿಯಾಗಿದ್ದಾರೆ. ಮುಂದೆ ಭಾರತವನ್ನು ವಿಶ್ವಗುರು ಆಗಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ನರೇಂದ್ರ ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಯುವಕರು ಬೂತ್ ಮಟ್ಟದಲ್ಲಿ ಶ್ರಮಿಸಬೇಕು.
Bigg Impact: ನಮ್ಮ ಮೆಟ್ರೋದಲ್ಲಿ ಗಲೀಜು ಬಟ್ಟೆ ಹಾಕಿದ್ದ ಎಂದು ರೈತನಿಗೆ ಅಪಮಾನ: ವರದಿ ಬಳಿಕ BMRCL ಸಿಬ್ಬಂದಿ ವಜಾ!
ಅಲ್ಲದೇ ವಿಶ್ವ ವಿಖ್ಯಾತ ಹಂಪಿಯಲ್ಲಿ ವಿದೇಶಿ ಪ್ರವಾಸಿಗರು ಮತ್ತೊಮ್ಮೆ ಮೋದಿ ಗೋಡೆ ಬರಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಘೋಷಣೆಗಳನ್ನು ಕೂಗಿರುವುದು ವಿಶೇಷ. ಅಲ್ಲದೇ ಕೇಂದ್ರ ಸರ್ಕಾರದ ಯೋಜನೆಗಳು ಪ್ರತಿಯೊಂದು ಮನೆಗೆ ಮುಟ್ಟಿಸುವಲ್ಲಿ ಯುವ ಮೋರ್ಚಾದ ಜವಾಬ್ದಾರಿ ಅಧಿಕವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಸೂಚಿಸಿದ ಕೆಲಸವನ್ನು ಮಾಡಬೇಕು ಎಂದರು.