ಬಳ್ಳಾರಿ: ರಸ್ತೆ ಅಪಘಾತದಲ್ಲಿ ಕಂಪ್ಲಿಯ ದೇವರಮನೆ ಯಲ್ಲಪ್ಪ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ರಸ್ತೆ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಸಿಂಧನೂರು ಮಾರ್ಗವಾಗಿ ಕಂಪ್ಲಿ ಪಟ್ಟಣದ ಕಡೆ ತೆರಳುತ್ತಿರುವಾಗ ಕಾರು ಹಾಗೂ ಲಾರಿಯ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಕಾರಿನಲ್ಲಿ ಕುಳಿತಿದ್ದ ದೇವರ ಮನೆ ಯಲ್ಲಪ್ಪ ಅವರ ತಲೆಗೆ ತೀವ್ರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದ್ದಿದ್ದಾನೆ. ಇನ್ನು ಕಾರಿನಲ್ಲಿ ಕುಳಿತಿದ್ದ ಹೆಂಡತಿ, ಮಗ, ಸೊಸೆ ಹಾಗೂ ಮೊಮ್ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕಂಪ್ಲಿ ಪೊಲೀಸರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.