ಹಾವೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾವು ಬಯಸುವಷ್ಟು ನೀಚಮಟ್ಟಕ್ಕೆ ಇಳಿದ ಕಾಂಗ್ರೆಸ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಹರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗಲ್ಲ ಎಂಬ ಕಾಂಗ್ರೆಸ್ ಶಾಸಕ ರಾಜು ಕಾಗೇ ಹೇಳಿಕೆಗೆ ಪ್ರತಿಕ್ರಿಯಿಸಿದರು.
ರಾಜು ಕಾಗೆ ಇಂತಹ ಹೇಳಿಕೆ ಇತ್ತೀಚೆಗೆ ಕೊಡುತ್ತಿದ್ದಾರೆ. ಪ್ರಧಾನ ಮಂತ್ರಿಗಳ ಸಾವನ್ನು ಬಯಸುವ ನೀಚ ಮಟ್ಟಕ್ಕೆ ಕಾಂಗ್ರೆಸ್ ಶಾಸಕರು ಇಳಿದಿದ್ದಾರೆ. ಅಂದರೆ, ಯಾವ ಮಟ್ಟಕ್ಕೆ ಹೋಗುತ್ತಿದ್ದಾರೆ ಎಂದು ಪ್ರಶ್ನಿಸಿದರು. ಯಾರೇ ಪ್ರತಿಸ್ಪರ್ದಿ ಇದ್ದರೂ ಸಾವನ್ನು ಬಯಸಬಾರದು. ಕೀಳು ಮಟ್ಟದ ಟೀಕೆ ಮಾಡಿದ್ದಷ್ಟು ಮೋದಿ ದೊಡ್ಡವರಾಗುತ್ತಲೇ ಬಂದಿದ್ದಾರೆ. ಮತ್ತೆ ಮತ್ತೆ ಗೆದ್ದು ಬಂದಿದ್ದಾರೆ.
Car airbags: ನಿಮ್ಮ ಕಾರಿನಲ್ಲಿರುವ ಏರ್ʼಬ್ಯಾಗ್ ಅಸಲಿಯೋ, ನಕಲಿಯೋ ತಿಳಿಯುವುದೇಗೆ ಗೊತ್ತಾ..? ಈ ಸ್ಟೋರಿ ನೋಡಿ
ಮೋದಿಯವರ ಆಯಸ್ಸು ಹೆಚ್ಚಾಗುತ್ತದೆ. ಆರೋಗ್ಯ ಚೆನ್ನಾಗಿ ಆಗುತ್ತದೆ. ಮೋದಿ ಅಲೆ ಸುನಾಮಿಯಾಗಿ ಪರಿವರ್ತನೆ ಆಗಿದೆ. ಮೋದಿ ಅಲೆಯಲ್ಲಿ ಇವರು ಕೊಚ್ಚಿ ಹೋಗುತ್ತಾರೆ ಎಂದರು. ಬಿಜೆಪಿ ಸಂವಿಧಾನ ಬದಲಾವಣೆ ಮಾಡಲು ಹೊರಟಿದೆ ಎಂಬ ಮಾಜಿ ಶಾಸಕ ಓಲೆಕಾರ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ನೆಹರೂ ಓಲೆಕಾರ್ ನಮ್ಮ ಪಕ್ಷದಲ್ಲಿ ಇದ್ದರು ಆಗೇನು ಸಂವಿಧಾನ ಬದಲಾಗಿತ್ತಾ? ಸಂವಿಧಾನ ಬದಲಾವಣೆ ಆಗುವ ಪ್ರಶ್ನೆಯೇ ಇಲ್ಲ ಎಂದರು.