ಹುಬ್ಬಳ್ಳಿ:– ಮೋದಿಗೆ ಮತ ಹಾಕಿದರೆ ಮಾತ್ರ ದೇಶ ಅಭಿವೃದ್ಧಿ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮೋದಿಯವರ ಆಡಳಿತದಲ್ಲಿ ದೇಶ ಬಲಿಷ್ಠವಾಗಿದೆ. ಒಂದು ಕಾಲದಲ್ಲಿ ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗಿತ್ತು. ಆದರೆ ಇಂದು ಭಯೋತ್ಪಾದಕರನ್ನು ಹುಡುಕಿ ಹೊಡೆಯುವ ಕೆಲಸವಾಗಿದೆ. ದೇಶದಲ್ಲಿ ಶಾಂತಿ ಇರುವ ಕಾರಣಕ್ಕೆ ರಾಮಮಂದಿರ ನಿರ್ಮಾಣವಾಗಿದೆ. ಭಾರತ ದೇಶವನ್ನು ಬಲಿಷ್ಠ ಮಾಡಲು ನಾವು ಸಂಕಲ್ಪ ಮಾಡಬೇಕು. ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ. ತೀಸ್ರೀ ಬಾರ್ ಮೋದಿ ಸರ್ಕಾರ ಬರಬೇಕು. ನೀವೇ ಜನತಾ ಜನಾರ್ದನ, ಶ್ರೀಮನ್ನಾರಾಯಣ, ಪಾಂಡುರಂಗ ಎನ್ನುವ ಮೂಲಕ ಹುಬ್ಬಳ್ಳಿಯಲ್ಲಿ ನಡೆದ ಗಾಳಿಪಟ ಉತ್ಸವದಲ್ಲಿ ನೆರೆದಿದ್ದವರನ್ನು ಜೋಶಿ ಹಾಡಿಹೊಗಳಿದರು.