ಬೆಂಗಳೂರು :- ಕರ್ನಾಟಕದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, 3 ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ರಾಜ್ಯದ 14 ಕ್ಷೇತ್ರಗಳಲ್ಲಿ ನಡೆಯುವ ಮೊದಲ ಹಂತದ ಮತದಾನಕ್ಕೆ, ಬಹಿರಂಗ ಪ್ರಚಾರ ಅಂತ್ಯವಾಗಿದೆ. ಸಂಜೆ 6 ಗಂಟೆಯಿಂದ 14 ಕ್ಷೇತ್ರಗಳಲ್ಲಿ 144 ಸೆಕ್ಷನ್ ಜಾರಿಯಾಗಿದ್ದು, ಸಭೆ, ಸಮಾರಂಭ, ಮೆರವಣಿಗೆ, ಧ್ವನಿವರ್ಧಕ ಬಳಕೆಗೆಲ್ಲ ಬ್ರೇಕ್ ಬಿದ್ದಿದೆ.
ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ವಂತ ಜಮೀನು ದಾನ ಮಾಡಿದ್ದೀನಿ, ಆ ಕುಮಾರಸ್ವಾಮಿ ಏನು ಮಾಡಿದ್ದಾನೆ!? – ಡಿಕೆಶಿ ವಾಗ್ದಾಳಿ!
ಕರ್ನಾಟಕದಲ್ಲಿ ಮೊದಲ ಹಂತದ (ದೇಶದ 2ನೇ ಹಂತ) ಲೋಕಸಭಾ ಸಮರದ ಅಬ್ಬರ ಬಹಿರಂಗ ಪ್ರಚಾರಕ್ಕೆ ಇಂದು (ಏಪ್ರಿಲ್ 24) ತೆರೆ ಬಿದ್ದಿದೆ. ಹೀಗಾಗಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಮುಖಂಡರು ಕ್ಷೇತ್ರ ಬಿಟ್ಟು ತೆರಳಿದ್ದಾರೆ. ಇನ್ನು ಅಭ್ಯರ್ಥಿಗಳು ಮಾತ್ರ ಮನೆ ಮನೆ ಪ್ರಚಾರ ಮಾಡಬಹುದಾಗಿದೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತದಾರರ ಮನವೊಲಿಕೆಗೆ ಅಂತಿಮ ಕಸರತ್ತು ನಡೆಸಲಿದ್ದಾರೆ. ಮನೆ ಮನೆ ಮತಯಾಚನೆ ವೇಳೆ 10 ಜನಕ್ಕಿಂತ ಹೆಚ್ಚಿನ ಜನರು ಇರುವಂತಿಲ್ಲ. ಅಭ್ಯರ್ಥಿ ಅಥವಾ ಅಭ್ಯರ್ಥಿ ಪರವಾಗಿ ಏಜೆಂಟ್ ಮೂರು ವಾಹನಗಳ ಬಳಸುವುದಕ್ಕೆ ಮಾತ್ರ ಅವಕಾಶವಿದೆ. ಈ ಮೂರು ವಾಹನಗಳಿಗೆ ಕಡ್ಡಾಯವಾಗಿ ಅನುಮತಿಯನ್ನು ಮೊದಲೇ ಪಡೆದಿರಬೇಕು. ಒಂದು ವಾಹನದಲ್ಲಿ ವಾಹನ ಚಾಲಕರು ಸೇರಿದಂತೆ 4 ಜನರಿಗಿಂತ ಹೆಚ್ಚು ಜನರು ಇರುವಂತಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗವು ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಬಹಿರಂಗ ಪ್ರಚಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಎಲ್ಲಾ ಘಟಾನುಘಟಿ ನಾಯಕರು ಕ್ಷೇತ್ರದಿಂದ ಹೊರಗೆ ತೆರಳಿದ್ದಾರೆ. ಒಂದು ವೇಳೆ ಚುನಾವಣಾ ಸಿಬ್ಬಂದಿ ಕ್ಷೇತ್ರಕ್ಕೆ ಸಂಬಂಧಪಡದವರು ಕಂಡು ಬಂದರೆ ಸೂಕ್ತ ಕ್ರಮ ಜರುಗಿಸಲಿದ್ದಾರೆ. ಹೊಟೇಲ್, ಬಾರ್ ಆ್ಯಂಡ್ ರೆಸ್ಟೊರೆಂಟ್ ಸೇರಿದಂತೆ ಇತರೆ ತಂಗುದಾಣಗಳ ಸ್ಥಳಗಳ ಮೇಲೆ ನಿಗಾವಹಿಸಲಿದ್ದು, ತಪಾಸಣೆ ಕಾರ್ಯ ನಡೆಸಲಿದ್ದಾರೆ. ಅಭ್ಯರ್ಥಿಗಳು ಮನೆಮನೆಗೆ ತೆರಳಿ ಮತಯಾಚಿಸಿ ಮತದಾರರ ಮನವೊಲಿಕೆಗೆ ಪ್ರಯತ್ನಿಸಲಿದ್ದಾರೆ. ಅಲ್ಲದೇ, ಪೊಲೀಸರು, ಅಬಕಾರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರೆ ವಿವಿಧ ತನಿಖಾ ತಂಡದ ಅಧಿಕಾರಿಗಳು ಸಹ ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯದಲ್ಲಿ ತೊಡಗಲಿದ್ದಾರೆ.
ಇನ್ನು, ಬಹಿರಂಗ ಪ್ರಚಾರಕ್ಕೆ ಕೊನೆಯ ದಿನ ಆಗಿರುವುದರಿಂದ ಹಲವು ಕ್ಷೇತ್ರಗಳಲ್ಲಿ ನಾಯಕರು ಇಂದು ಕೊನೆ ಕ್ಷಣದಲ್ಲಿ ಭರ್ಜರಿ ಪ್ರಚಾರ ಮಾಡಿದ್ರು. ಮಂಡ್ಯದ ಹಲವು ಭಾಗಗಳಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್ಡಿ.ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಕೂಡ ಮತಯಾಚಿಸಿದ್ರು. ಇನ್ನು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರ ಬಿಎಸ್ವೈ
ರೋಡ್ ಶೋ ನಡೆಸಿದ್ರು.. ಹಾಸನದ ಹಲವು ಭಾಗಗಳಲ್ಲಿ ಎಚ್ಡಿ.ದೇವೇಗೌಡರು, ಮೊಮ್ಮಗ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ್ರು.
ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, 14 ಕ್ಷೇತ್ರಗಳಲ್ಲಿ ಇಂದು(ಏಪ್ರಿಲ್ 24) ಸಂಜೆ 6ಗಂಟೆಯಿಂದಲೇ ನಿಷೇಧಾಜ್ಞೆ ಜಾರಿ ಆಗಿದೆ. ಈ ಹಿನ್ನೆಲೆಯಲ್ಲಿ ಮೂರು ದಿನ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ.. ಇಂದು ಸಂಜೆ 6 ಗಂಟೆಯಿಂದಲೇ ಲಿಕ್ಕರ್ ಶಾಪ್ಗಳು ಕ್ಲೋಸ್ ಆಗಿದ್ದು, ಶುಕ್ರವಾರದ (ಏಪ್ರಿಲ್ 26ರಂದು ಮತದಾನ ಮುಗಿಯುವವರೆಗೆ) ತನಕ ಮದ್ಯ ಮಾರಾಟ ನಿಷೇಧಿಸಲಾಗಿದೆ. ಹೀಗಾಗಿ ಸಂಜೆ ಬಾರ್ಗಳು ಬಂದ್ ಆಗುವ ಸಮಯ ಹತ್ತಿರ ಆಗುತ್ತಿದ್ದಂತೆಯೇ ಮದ್ಯ ಪ್ರಿಯರು ಓಡೋಡಿ ಹೋಗಿ ಎಣ್ಣೆ ಖರೀದಿಸಿದ್ದಾರೆ. ಮೂರು ದಿನಕ್ಕೆ ಆಗವಷ್ಟು ಮದ್ಯ ಖರೀದಿಗೆ ಮುಗಿಬಿದ್ದಿರುವ ದೃಶ್ಯ ಕಂಡುಬಂದಿದೆ