ಬೆಂಗಳೂರು: “ರಾಜ್ಯದ ಟೈಂ ಸರಿಯಿಲ್ಲ, ಇದರಲ್ಲಿ ವಿರೋಧ ಪಕ್ಷಗಳ ಕೈವಾಡ ಇರಬಹುದು.” ಹೀಗಂದಿದ್ದು ಸಚಿವ ಎನ್ ಚಲುವರಾಯಸ್ವಾಮಿ. ಸಿಎಂ ಬದಲಾವಣೆ, ಹೆಚ್ಚುವರಿ ಡಿಸಿಎಂ ಚರ್ಚೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಸಮಯ ಸರಿಯಿಲ್ಲ ಅನಿಸುತ್ತಿದೆ ಎಂದರು. ಇದರಲ್ಲಿ ಯಾರದ್ದೋ ಕೈವಾಡ ಇರಬಹುದು. ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಚುನಾವಣೆಗಳಲ್ಲಿ ಕಾಂಗ್ರೆಸ್ ಸ್ಥಾನಗಳು ಹೆಚ್ಚಾಗಿವೆ. ಹಾಗಾಗಿ ಸದ್ಯದ ಪರಿಸ್ಥಿತಿಯ ಹಿಂದೆ ವಿರೋಧ ಪಕ್ಷಗಳ ಕೈವಾಡ ಇರಬಹುದು ಎಂದು ವ್ಯಾಖ್ಯಾನಿಸಿದರು.
ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಬೇಕು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಹಳ ಚೆನ್ನಾಗಿದ್ದಾರೆ. ಅವರಿಬ್ಬರ ನಡುವೆಯೂ ಹೊಂದಾಣಿಕೆಯೂ ಚೆನ್ನಾಗಿದೆ. ಹೈಕಮಾಂಡ್ ಸಹ ಅವರಿಬ್ಬರನ್ನು ಕೂರಿಸಿಕೊಂಡು ಚರ್ಚೆ ಮಾಡುತ್ತದೆ ಎಂದರು.
![Demo](https://ainlivenews.com/wp-content/uploads/2023/12/spoorthi-1.jpg)
https://ainlivenews.com/after-6-years-of-ordering-online-the-phone-came-from-flipkart/
ಸಿಎಂ ಬದಲಾವಣೆ , ಹೆಚ್ಚುವರಿ ಡಿಸಿಎಂ ವಿಚಾರವಾಗಿ ಹೈಕಮಾಂಡ್ ಯಾವಾಗ ತೀರ್ಮಾನ ಮಾಡಬೇಕೋ ಆಗ ಮಾಡ್ತಾರೆ. ಸ್ವಾಮೀಜಿಗಳು ಅವರ ಅಭಿಪ್ರಾಯ ಹೇಳಿದ್ದಾರೆ. ಆದರೆ ಹೇಳುವ ವೇದಿಕೆ ಅದಲ್ಲ ಎನ್ನುವ ಚರ್ಚೆಯಿದೆ. ಸ್ವಾಮೀಜಿಗಳಿಗೆ ಅಲ್ಲಿ ಇಲ್ಲಿ ಮಾತಾಡಿ ಎಂದು ನಾವು ನಿರ್ದೇಶನ ನೀಡಲು ಆಗುವುದಿಲ್ಲ ಎಂದು ಹೇಳಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)