ನವದೆಹಲಿ :- ಲೋಕಸಭೆಯ ಭದ್ರತಾ ವೈಫಲ್ಯಕ್ಕೆ ವಿಪಕ್ಷದ ಬೆಂಬಲವಿದೆ ಎಂದು PM ನರೇಂದ್ರ ಮೋದಿ ಹೇಳಿದ್ದಾರೆ.
ಭದ್ರತಾ ವೈಫಲ್ಯ ಘಟನೆಗೆ ರಾಜಕೀಯ ಬಣ್ಣ ನೀಡುವ ಮೂಲಕ ಈಚಿನ ವಿಧಾನಸಭೆ ಚುನಾವಣಾ ಸೋಲಿನ ಹತಾಶೆಯನ್ನು ವಿಪಕ್ಷಗಳು ಹೊರಹಾಕುತ್ತಿವೆ. ವಿರೋಧ ಪಕ್ಷಗಳ ಗುರಿಯು ನಮ್ಮ ಸರ್ಕಾರವನ್ನು ಕೆಳಗಿಳಿಸುವುದಾಗಿದೆ. ಆದರೆ ನಮ್ಮ ಸರ್ಕಾರದ ಗುರಿಯು ದೇಶಕ್ಕೆ ಉಜ್ವಲ ಭವಿಷ್ಯ ಖಾತ್ರಿಪಡಿಸುವುದಾಗಿದೆ’ ಎಂದು ಹೇಳಿದರು.
‘ಸಂಸತ್ತಿನ ಭದ್ರತಾ ವೈಫಲ್ಯವನ್ನು ಸಮರ್ಥಿಸಿಕೊಳ್ಳುವ ಕೆಲಸ ನಡೆಯುತ್ತಿದೆ. ಇದು ಭದ್ರತಾ ವೈಫಲ್ಯದಷ್ಟೇ ಗಂಭೀರ ಸಮಸ್ಯೆ’ ಎಂದು ಮೋದಿ ಹೇಳಿರುವುದಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದರು.
ನಿರುದ್ಯೋಗ, ಬೆಲೆ ಏರಿಕೆಯು ಸಂಸತ್ತಿನ ಭದ್ರತಾ ವೈಫಲ್ಯಕ್ಕೆ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈಚೆಗೆ ಆರೋಪಿಸಿದ್ದರು. ಈ ಹೇಳಿಕೆ ಹಿನ್ನೆಲೆಯಲ್ಲಿ ಮೋದಿ ಅವರು ಹೀಗೆ ಹೇಳಿದ್ದಾರೆ. ಪ್ರಜಾಪ್ರಭುತ್ವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ನಂಬಿಕೆ ಇರಿಸಿರುವ ಎಲ್ಲರೂ ಭದ್ರತಾ ವೈಫಲ್ಯ ಕೃತ್ಯವನ್ನು ಖಂಡಿಸಬೇಕು ಎಂದಿದ್ದಾರೆ.