ಉತ್ತರ ಕನ್ನಡ :- ಜಿಲ್ಲೆಯ ತಾಲೂಕಿನ ಕಾಸರಕೋಡು ಬಳಿ ಚತುಷ್ಪಥ ರಸ್ತೆ ನಿರ್ಮಾಣ ವಿರೋಧಿಸಿ ಮೀನುಗಾರರು ಪ್ರತಿಭಟನೆ ನಡೆಸಿದ್ದಾರೆ.
ಸ್ಥಳಕ್ಕೆ ಎಎಸ್ಪಿ ಭೇಟಿ ನೀಡಿದ್ರೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಪ್ರತಿಭಟನೆ ಹತ್ತಿಕ್ಕಲು 200ಕ್ಕೂ ಹೆಚ್ಚು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಈ ವೇಳೆ ಮಹಿಳೆಯರು ಹಾಗೂ ಪುರುಷರಿಗೆ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ.
ಹೊನ್ನಾವರ ಸಮೀಪ ನಿರ್ಮಾಣ ಆಗುತ್ತಿರುವ ಹೊಸ ಬಂದರಿಗೆ ಹೋಗಲು 4 ಲೈನ್ ರಸ್ತೆ ನಿರ್ಮಾಣಕ್ಕೆ ಸರ್ವೆ ಕಾರ್ಯ ಆರಂಭಿಸಲಾಗಿದೆ. ಇದರಿಂದ ಮನೆ ಕಳೆದುಕೊಳ್ಳುವ ಭೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ‘ಒಂದು ವೇಳೆ ಮನೆಗಳಿಗೆ ಬೇರೆಡೆ ಜಾಗ ನೀಡಿದರೆ,ನಮ್ಮ ಮೀನುಗಾರಿಕೆಗೆ ಸಮಸ್ಯೆ ಆಗುತ್ತದೆ. ಈ ಹಿನ್ನಲೆ ಮನೆ ಇರುವ ಕಡೆ ರಸ್ತೆ ನಿರ್ಮಿಸದಂತೆ ಮೀನುಗಾರರು ಒತ್ತಾಯಿಸಿದ್ದಾರೆ.