ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್ಸಿಬಿ-ಸಿಎಸ್ಕೆ ಪಂದ್ಯ ವೀಕ್ಷಿಸಲು ಶಿವರಾಜ್ ಕುಮಾರ್ ಆಗಮಿಸಿದ್ದಾರೆ. ಅಲ್ಲದೇ ನಮ್ಮ ಹುಡುಗರೇ ಗೆಲ್ಲೋದು ಎಂದು ಭವಿಷ್ಯ ನುಡಿದಿದ್ದಾರೆ.
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್.. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದ ಬಿವೈ ವಿಜಯೇಂದ್ರ!
ಆರ್ಸಿಬಿ ತಂಡದ ಅಪ್ಪಟ ಅಭಿಮಾನಿ ಹಾಗೂ ಬೆಂಬಲಿಗರಾಗಿರುವ ಶಿವಣ್ಣ ಆರ್ಸಿಬಿ ಜರ್ಸಿ ತೊಟ್ಟು ಚಿನ್ನಸ್ವಾಮಿಗೆ ಹೋಗಿದ್ದಾರೆ. ಶಿವರಾಜ್ ಕುಮಾರ್ ಜೊತೆಗೆ ನಿರ್ಮಾಪಕ ಕೆಪಿ ಶ್ರೀಕಾಂತ್ ಸೇರಿದಂತೆ ಇನ್ನೂ ಕೆಲವು ಚಿತ್ರರಂಗದ ಗೆಳೆಯರಿದ್ದಾರೆ. ಟ್ವಿಟ್ಟರ್ನಲ್ಲಿ ಸಹ ತಮ್ಮ ಚಿತ್ರಗಳನ್ನು ಅಪ್ಲೋಡ್ ಮಾಡಿರುವ ಶಿವಣ್ಣ, ‘ಬರ್ಕಳಯ್ಯ, ಮುಂದುಗಡೆ ಪೇಜ್ನಲ್ಲಿ ಬರ್ಕೋ ಗೆಲ್ಲೋದು ಆರ್ಸಿಬಿ ಹುಡುಗರೇಯ’ ಎಂದಿದ್ದಾರೆ. ಶಿವಣ್ಣನನ್ನು ಚಿನ್ನಸ್ವಾಮಿಯ ದೊಡ್ಡ ಪರದೆಯ ಮೇಲೆ ತೋರಿಸುತ್ತಿದ್ದಂತೆ ಪ್ರೇಕ್ಷಕರು ಕೂಗಾಡಿ ಕಿರುಚಾಡಿ ಅಬ್ಬರ ಎಬ್ಬಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಇತರೆ ಕೆಲವು ಸಂಪುಟ ಸಚಿವರು, ಕಾಂಗ್ರೆಸ್ ಮುಖಂಡರು ಸಹ ಮ್ಯಾಚ್ ನೋಡಲು ಬಂದಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)