ಮಂಡ್ಯದಲ್ಲಿ ಮಂಡ್ಯ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಿ ಕಿಟಕಿ ಗಾಜುಗಳನ್ನು ಧ್ವಂಸಗೊಳಿದವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ದಾವಣಗೆರೆಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ದಾವಣಗೆರೆ ಜಿಲ್ಲಾ ಕುರುಬರ ಸಂಘ ಹಾಗೂ ಸಮಾಜದ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದು, ಕೂಡಲೇ ದುಷ್ಕರ್ಮಿಗಳ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜನವರಿ 29 ರಂದು ಮಧ್ಯಾಹ್ನ ಸುಮಾರು ಎರಡು ಗಂಟೆ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಾಜಿ ಸಚಿವರಾದ ಸಿಟಿ ರವಿ ರವರ ನೇತೃತ್ವದಲ್ಲಿ ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ನಡೆದ ಹನುಮಧ್ವಜದ ವಿವಾದದ ಪ್ರತಿಭಟನೆಯ ಮೆರವಣಿಗೆ ಸಮಯದಲ್ಲಿ ಮಂಡ್ಯ ನಗರದ ಬಿಎಂ ರಸ್ತೆಯಲ್ಲಿರುವ ಮಂಡ್ಯ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲುತೂರಾಟ ಮಾಡಿ ಕಟ್ಟಡದ ಕಿಟ್ಟಿಕಿ ಗಾಜುಗಳನ್ನು ಧ್ವಂಸಗೊಳಿಸಿ ಹಾನಿ ಮಾಡಿದ ಇಂಥ ಕಿಡಿಗೇಡಿಗಳ ಮೇಲೆ ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದರು.
ಈ ವಿವಾದವನ್ನು ರಾಜಕೀಯ ದುರುದ್ದೇಶಕ್ಕಾಗಿ ಸೃಷ್ಟಿಸಲಾಗಿದೆ. ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಒಕ್ಕೂಟದಿಂದ ಶೋಷಿತರ ಸಮಾವೇಶ ಯಶಸ್ವಿಯಾಗಿರುವುದನ್ನು ಸಹಿಸಲಾಗದೆ ಅಸೂಯೆಯಿಂದ ಸಿದ್ದರಾಮಯ್ಯನವರನ್ನು ಗುರಿಯಾಗಿಸಿ ಹೀನ ಕೃತ್ಯಗಳನ್ನು ಸೃಷ್ಟಿಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮತ್ತು ಬಿಜೆಪಿ ಪಕ್ಷದ ಮುಖಂಡರು ಹಿಂದೂ ಧರ್ಮವನ್ನು ಗುತ್ತಿಗೆಗೆ ತೆಗೆದುಕೊಂಡವರ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಈ ದಬ್ಬಾಳಿಕೆ ಮತ್ತು ನೀಚ ಕೃತ್ಯವನ್ನು ಸಮರ್ಥವಾಗಿ ಎದುರಿಸಲು ಕುರುಬ ಸಮಾಜ ಶಕ್ತವಾಗಿದೆ. ನಮ್ಮ ಸಮಾಜದ ಸಹನೆ ಮತ್ತು ತಾಳ್ಮೆ ಪರೀಕ್ಷಿಸಬೇಡಿ ಎಂದು ಸಮಾಜದ ಮುಖಂಡರು ಎಚ್ಚರಿಕೆಯನ್ನ ನೀಡಿದ್ದಾರೆ.