ಬೆಂಗಳೂರು: ಹೊರಗುತ್ತಿಗೆ ನೇಮಕಾತಿ ವಿಚಾರದಲ್ಲಿ ದಲಿತರಿಗೆ ವಂಚನೆ ಮಾಡುವ ಮೀಸಲಾತಿಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿದೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ವರ್ಗಗಳು ಮತ್ತು ಮಹಿಳಾ ಮೀಸಲಾತಿಗೆ ಅನುಗುಣವಾಗಿ ರಾಜ್ಯ ಸರ್ಕಾರ ಗುತ್ತಿಗೆ ಆಧಾರದಲ್ಲಿ ನೇಮಕಾತಿಯಲ್ಲಿ ಮಾಡುವುದರಲ್ಲೂ ಕೂಡ ಮೀಸಲಾತಿ ನೀಡಿರುವುದಾಗಿ ತಿಳಿಸಿದ್ದು ಸ್ವಾಗತಾರ್ಹ ಎಂದರು.
2022-23ರಲ್ಲಿ ನಮ್ಮ ಸರಕಾರ ಇದ್ದಾಗ ಬಸವರಾಜ ಬೊಮ್ಮಾಯಿಯವರು ಈ ಕುರಿತು ತೀರ್ಮಾನ ಮಾಡಿದ್ದರು. ಈ ಕುರಿತು ಪರಿಶಿಷ್ಟ ಜಾತಿ, ವರ್ಗದವರು ಬಹುದಿನಗಳ ಕಾಲ ಹೋರಾಟ ಮಾಡಿದ್ದರು. ಮೇಲ್ಮನೆಯಲ್ಲಿ ನಾನು ಈ ಕುರಿತು ಪ್ರಶ್ನಿಸಿದ್ದೆ. ಹೊರಗುತ್ತಿಗೆ ನೀಡುವಾಗ ಪರಿಶಿಷ್ಟ ಜಾತಿ, ವರ್ಗಗಳಿಗೆ ಅನ್ಯಾಯ ಆಗುತ್ತಿದೆ. ಅದರಲ್ಲೂ ಮೀಸಲಾತಿ ಕೊಡಲು ಕೇಳಿದ್ದೆ. ಆಗಲೇ ಸರಕಾರ ಒಪ್ಪಿಗೆ ಕೊಟ್ಟಿತ್ತು ಎಂದು ನೆನಪಿಸಿದರು.
NBCC Recruitment: ಪರೀಕ್ಷೆಯಿಲ್ಲದೆ NBCC ಕಾರ್ಪೊರೇಷನ್’ನಲ್ಲಿದೆ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಕಳೆದರೂ, ನಾವು ಒತ್ತಡ ಹೇರಿದ್ದರೂ ಅದನ್ನು ಜಾರಿ ಮಾಡಿರಲಿಲ್ಲ. ಕೊನೆಗೂ ಒಂದು ತೀರ್ಮಾನ ತೆಗೆದುಕೊಂಡಿದ್ದಾರೆ. ತೀರ್ಮಾನ ಮಾಡುವಾಗಲೂ ತಾರತಮ್ಯ ಮಾಡಿದ್ದಾರೆ. ಕಾಂಗ್ರೆಸ್ ನಿರಂತರವಾಗಿ ದಲಿತ ವಿರೋಧಿ ಚಟುವಟಿಕೆ, ಸಂಸ್ಕøತಿಯನ್ನು ಮಾಡುತ್ತ ಬಂದಿದೆ. ಯಾವುದೇ ಇಲಾಖೆಯಲ್ಲಿ 20 ನೇಮಕಾತಿ ನಡೆದರೆ ಮೀಸಲಾತಿ ಇಲ್ಲ; ಅದಕ್ಕಿಂತ ಹೆಚ್ಚು ಬಂದರೆ ಮಾತ್ರ ಮೀಸಲಾತಿ ಎಂದಿದ್ದಾರೆ. ಇದು ದಲಿತರು, ಮಹಿಳೆಯರಿಗೆ ಮಾಡುವ ಮೋಸ ಅಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.