ಬೆಂಗಳೂರು:- ನಮಗೆ ಪಾಕಿಸ್ತಾನ ಶತ್ರು ದೇಶವಲ್ಲ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ವಿಧಾನ ಪರಿಷತ್ ಕಪಾಲದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಬಿಕೆ ಹರಿಪ್ರಸಾದ್ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ಗೆ ಪಾಕಿಸ್ತಾನ ಶತ್ರು ರಾಷ್ಟ್ರವಲ್ಲ ಎಂದು ಹೇಳಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಸೋಮವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ನಾಸೀರ್ ಹುಸೇನ್ ವಿಜಯಶಾಲಿ ಎಂದು ಘೋಷಿಸಿದ ನಂತರ ವಿಧಾನಸೌಧದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಒಬ್ಬರು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದರು. ಈ ಸಂಬಂಧ ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಬುಧವಾರ ಉಭಯ ಸದನಗಳಲ್ಲಿ ಗದ್ದಲ ಸೃಷ್ಟಿಸಿತು.
ಪರಿಷತ್ತಿನಲ್ಲಿ ನಡೆದ ಚರ್ಚೆಯ ವೇಳೆ ಹರಿಪ್ರಸಾದ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.ಶತ್ರು ದೇಶ ಎಂದರೆ ನಿಮ್ಮ ಪ್ರಕಾರ ಅದು ಪಾಕಿಸ್ತಾನ. ಆದರೆ, ನಮಗೆ ಅದು ಶತ್ರು ದೇಶವಲ್ಲ, ನೆರೆಯ ದೇಶ ಮಾತ್ರ ಎಂದಿದ್ದಾರೆ. ಈ ಹೇಳಿಕೆ ಹೊರಬೀಳುತ್ತಿದ್ದಂತೆ ಹಲವಾರು ಬಿಜೆಪಿ ಸದಸ್ಯರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಾಕಿಸ್ತಾನದ ಬಗ್ಗೆ ಮೃದುತ್ವವನ್ನು ತೋರಿಸುತ್ತಿದೆ ಎಂದು ಆರೋಪಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)