ದಾವಣಗೆರೆ: ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಕಾಂಗ್ರೆಸ್ ನ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ದೇಶ ವಿರೋಧಿ ಕೃತ್ಯ, ದೇಶದ್ರೋಹಿ ಘೋಷಣೆ ಕೂಗಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ ದಾವಣಗೆರೆಯ ಎಸ್.ನಿಜಲಿಂಗಪ್ಪ ಬಡಾವಣೆಯ ಸ್ಮಾರಕ ಉದ್ಯಾನವನದ ಮುಂದೆ ಪ್ರತಿಭಟನೆ ನಡೆಸಿದರು.
ಬಳಿಕ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದರು.ಈ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ಹಾಗೂ ಘೋಷಣೆ ಕೂಗಿದವರ ವಿರುದ್ಧ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮುಖಂಡ ಕೊಳೇನಹಳ್ಳಿ ಬಿ.ಎಂ.ಸತೀಶ್, ಕಾಂಗ್ರೆಸ್ ಪಕ್ಷದ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ದೇಶ ವಿರೋಧಿ ಕೃತ್ಯ. ದೇಶದ್ರೋಹಿ ಘೋಷಣೆ ಕೂಗಿದವರನ್ನು ಬಂಧಿಸಬೇಕು. ಇನ್ನೂ ಇದನ್ನು ಪ್ರಶ್ನಿಸಿದ ಮಾಧ್ಯಮದವರನ್ನು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ನಾಸೀರ್ ಹುಸೇನ್ ಗದರಿಸಿ. ನಡೀಯೋ ಯಾವನೋ ನೀನು ನೌನ್ನು ಎಂದು ಅಸಭ್ಯವಾಗಿ ವರ್ತಿಸಿದ್ದಾರೆ.
ಈ ವರ್ತನೆಯಲ್ಲ. ಅವರದು ಅನಾಗರಿಕ ಪ್ರವೃತ್ತಿ ಎಂದು ಕಿಡಿಕಾರಿದರು. ಯುವಮೋರ್ಚಾದ ರಾಜನಹಳ್ಳಿ ಶಿವಕುಮಾರ್, ಕಾಂಗ್ರೆಸ್ ಪಕ್ಷ ದೇಶಕ್ಕೆ ಮಾರಕ ಕಾಯಿಲೆ ಇದ್ದಂತೆ. ಅದರಲ್ಲೂ ದೇಶ ದ್ರೋಹದ ಕೆಲಸ, ಇಂತಹ ಖದೀಮರು ಕರ್ನಾಟಕದಿಂದ ಆಯ್ಕೆ ಆಗಿರುವುದು ಇಡೀ ಕನ್ನಡ ನಾಡಿನ ಜನತೆ ತಲೆ ತಗ್ಗಿಸುವಂತೆ ಮಾಡಿದೆ. ತಕ್ಷಣ ಕಾಂಗ್ರೆಸ್ ಪಕ್ಷ ಇಂತಹ ದೇಶದ್ರೋಹಿ ಚಟುವಟಿಕೆಗಳ ಬಗ್ಗೆ ತನ್ನ ನಿಲುವೇನು ಎಂಬುದನ್ನು ಸ್ಪಷ್ಟವಾಗಿ ಹೇಳಬೇಕು ಎಂದು ಆಗ್ರಹಿಸಿದರು.