ಕರಾಚಿ : ದೇಶಾದ್ಯಂತ ರಾಮಮಂದಿರ ಉದ್ಘಾಟನೆಯನ್ನು ಕಣ್ತುಂಬಿಕೊಂಡಿದ್ದಾರೆ. ಐದು ಶತಮಾನಗಳ ಕಾಲ ಭಾರತೀಯರು ಕಾಯುತ್ತಿದ್ದ ಶ್ರೀರಾಮನ ಮಂದಿರ ಸಕಾರಗೊಂಡಿದೆ. ಈ ಮದುರ ಕ್ಷಣವನ್ನು ಕೋಟ್ಯಂತರ ಭಾರತೀಯರು, ಸಿನಿಮಾ ನಟರು, ಕ್ರಿಕೆಟಿಗರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಪಾಲ್ಗೊಂಡು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಇದೇ ಸಂದರ್ಭದಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ಕೆ ಖಂಡನೆ ವ್ಯಕ್ತಪಡಿಸಿದ್ದು,
ಇದು ಪ್ರಜಾಪ್ರಭುತ್ವದ ಮೇಲೆ ಕಪ್ಪುಚುಕ್ಕೆ ಎಂದು ವಿಷ ಕಾರಿಕೊಂಡಿದೆ. ಭಾರತದ ಮುಸ್ಲಿಮರನ್ನು ಮೂಲೆಗುಂಪು ಮಾಡುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿರುವ ಪಾಕಿಸ್ತಾನ, ಭಾರತದಲ್ಲಿ ಬಹುಸಂಖ್ಯಾತರ ಮೇಲುಗೈ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಮುಂದೆ ಕಾಶಿಯ ಜ್ಞಾನವ್ಯಾಪಿ ಮಸೀದಿ ಹಾಗೂ ಮಥುರಾದ ಶಾಹಿ ಈದ್ಗಾ ಮಸೀದಿಗೂ ಸಹ ಆತಂಕ ಶುರುವಾಗಿದೆ. ವಿಶೇಷವಾಗಿ, ವಾರಾಣಸಿ ಜ್ಞಾನವಾಪಿ ಮಸೀದಿ & ಮಥುರಾ ಶಾಹಿ ಈದ್ಗಾ ಮಸೀದಿ ಸೇರಿ ಮಸೀದಿಗಳ ಮೇಲೆ ದೇವಾಲಯ ನಿರ್ಮಿಸಲು ಉದ್ದೇಶಿಸಿರುವ ಪಟ್ಟಿಯೂ ಬೆಳೆಯುತ್ತಿದೆ. ಇದು ಅಪವಿತ್ರತೆ & ವಿನಾಶ’ ಅಂತಾ ಹೇಳಿದೆ ಪಾಕಿಸ್ತಾನ ಸರ್ಕಾರ ಹೇಳಿದೆ.
🔊: PR NO. 2️⃣4️⃣/2️⃣0️⃣2️⃣4️⃣
Pakistan Condemns Consecration of the ‘Ram Temple’ on the Site of Demolished Babri Mosque
🔗⬇️https://t.co/s3zJmZMhzN pic.twitter.com/X5rYshPxDu
— Spokesperson 🇵🇰 MoFA (@ForeignOfficePk) January 22, 2024
ಇನ್ನೂ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಸ್ ಕನೇರಿಯಾ ಕೂಡ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯನ್ನು ಸಂಭ್ರಮವನ್ನು ಆಚರಿಸಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾನ ನೆರೆವೇರುತ್ತಿದ್ದಂತೆ ಕನೇರಿಯಾ ಹಣೆಗೆ ತಿಲಕವನ್ನಿಟ್ಟುಕೊಂಡು ನೃತ್ಯ ಮಾಡಿ, ಪ್ರಾರ್ಥನೆ ಸಲ್ಲಿಸಿ ಸಂಭ್ರಮಿಸಿರುವ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು.